ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
TSK
TSK · ಪ್ರಸಂಗಿ 4:1
مراجع Treasury of Scripture Knowledge في ಕನ್ನಡ IRV.
¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.
ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು.
ಯೆಹೋವನು ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವನು; ಆಗ ನೀವು ಹಸಿವೆ, ಬಾಯಾರಿಕೆಗಳುಳ್ಳವರಾಗಿ, ಬಟ್ಟೆಯೂ ಮತ್ತು ಏನೂ ಇಲ್ಲದವರಾಗಿ ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಯೆಹೋವನು ಕಬ್ಬಿಣದ ನೊಗವನ್ನು ಹೇರಿಸಿ ನಿಮ್ಮನ್ನು ನಾಶಮಾಡುವನು.
ಆದುದರಿಂದ ಆತನು ಇಸ್ರಾಯೇಲರ ಮೇಲೆ ಕೋಪಗೊಂಡು ಅವರನ್ನು ಫಿಲಿಷ್ಟಿಯರ ಮತ್ತು ಅಮ್ಮೋನಿಯರ ಕೈಗೆ ಒಪ್ಪಿಸಿಬಿಟ್ಟನು.
ದಯವಿಟ್ಟು ನನ್ನ ವಿಚಾರಣೆಗೆ ಅನ್ಯಾಯವಾಗದಿರಲಿ; ಮತ್ತೆ ವಿಮರ್ಶೆ ಮಾಡಿರಿ. ನನ್ನ ವ್ಯಾಜ್ಯವು ನ್ಯಾಯವಾದದ್ದು.
ನಾನೂ ನಿಮ್ಮ ಹಾಗೆ ಮಾತನಾಡಬಲ್ಲೆನು; ನಾನು ನಿಮ್ಮಂತೆ ಇದ್ದಿದ್ದರೆ, ನಾನು ನಿಮ್ಮ ವಿರುದ್ಧವಾಗಿ ಮಾತುಗಳನ್ನು ಹೆಣೆದು ನಿಮ್ಮ ವಿಷಯದಲ್ಲಿ ತಲೆಯಾಡಿಸಬಹುದಾಗಿತ್ತು.
ಹೊದಿಕೆ ಇಲ್ಲದೆ ಬೆತ್ತಲೆಯಾಗಿ ರಾತ್ರಿಯನ್ನು ಕಳೆಯುವರು, ಚಳಿಗಾಲದಲ್ಲಿಯೂ ಅವರಿಗೆ ಬಟ್ಟೆಯಿಲ್ಲ.
ಅಪಾರವಾದ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾ, ಬಲಿಷ್ಠರ ಭುಜಬಲದಿಂದ ಪೀಡಿತರಾಗಿ ಕೂಗಿಕೊಳ್ಳುವರು.
ಯೆಹೋವನು, “ಕುಗ್ಗಿದವರ ಬಾಧೆಯನ್ನು ನೋಡಿದ್ದೇನೆ; ಗತಿಯಿಲ್ಲದವರ ನರಳುವಿಕೆಯು ನನಗೆ ಕೇಳಿಸಿತು. ಈಗ ಎದ್ದು ಬಂದು ಅವರ ಇಷ್ಟಾರ್ಥವನ್ನು ನೆರವೇರಿಸುವೆನು. ಅವರು ಬಯಸಿದಂತೆ ಅವರನ್ನು ಸುರಕ್ಷಿತವಾಗಿ ಇರಿಸುವೆನು” ಎಂದು ಹೇಳುತ್ತಾನೆ.
ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.
ನನಗೆ ಉಣ್ಣುವುದಕ್ಕೆ ಕಹಿಯಾದ ವಸ್ತುವನ್ನೂ, ಬಾಯಾರಿದಾಗ, ಹುಳಿ ದ್ರಾಕ್ಷಾರಸವನ್ನೂ ಕೊಟ್ಟರು.
ವೈರಿಗಳು ಹಗಲೆಲ್ಲಾ ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಾವೇಶವುಳ್ಳವರು ಯಾರನ್ನಾದರೂ ಶಪಿಸುವಾಗ, ನನ್ನನ್ನು ದೃಷ್ಟಾಂತಮಾಡಿ ಶಪಿಸುತ್ತಾರೆ.
ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.
ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.
ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.
¶ ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ.
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ;
ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.
ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.
¶ ಅಷ್ದೋದಿನ ಅರಮನೆಗಳಲ್ಲಿಯೂ, ಐಗುಪ್ತ ದೇಶದ ಅರಮನೆಗಳಲ್ಲಿಯೂ ಹೀಗೆ ಪ್ರಕಟಿಸಿರಿ, “ಸಮಾರ್ಯದ ಬೆಟ್ಟಗಳಲ್ಲಿ ಕೂಡಿಬನ್ನಿರಿ. ಪಟ್ಟಣದೊಳಗೆ ಇರುವ ಗದ್ದಲವನ್ನು, ಅದರೊಳಗಿರುವ ಹಿಂಸೆಯನ್ನೂ ನೋಡಿರಿ.
ಇನ್ನೊಂದು ಕೆಲಸವನ್ನು ಮಾಡುತ್ತೀರಿ - ಯೆಹೋವನ ಯಜ್ಞವೇದಿಯನ್ನು ನರಳಾಟದಿಂದಲೂ, ಗೋಳಾಟದಿಂದಲೂ ಕಣ್ಣೀರಿನಿಂದಲೂ ತುಂಬಿಸಿ ಮುಚ್ಚುತ್ತೀರಿ; ಆದಕಾರಣ ಆತನು ನಿಮ್ಮ ನೈವೇದ್ಯವನ್ನು ಇನ್ನು ಲಕ್ಷಿಸನು, ನಿಮ್ಮ ಕೈಯಿಂದ ಅದನ್ನು ಪ್ರಸನ್ನನಾಗಿ ಸ್ವೀಕರಿಸನು.
ಆಗ ಶಿಷ್ಟರಿಗೂ, ದುಷ್ಟರಿಗೂ, ದೇವರನ್ನು ಸೇವಿಸುವವರಿಗೂ, ಸೇವಿಸದೇ ಇರುವವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ಕಾಣುವಿರಿ.
ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.