ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ. ಇವರು ನನ್ನ ಹೆಸರನ್ನು, ನನ್ನ ಪೂರ್ವಿಕರಾದ ಅಬ್ರಹಾಮ ಇಸಾಕರ ಹೆಸರಿನಿಂದ ಇವರ ಹೆಸರುಗಳು ನೆಲೆಗೊಳ್ಳಲಿ, ಇವರು ಭೂಮಿಯ ಮೇಲೆ ಹೆಚ್ಚಿ ಬಹು ಸಂತಾನವನ್ನು ಪಡೆಯಲಿ” ಎಂದನು.
TSK
TSK · ಪ್ರಸಂಗಿ 5:6
مراجع Treasury of Scripture Knowledge في ಕನ್ನಡ IRV.
¶ “‘ಯೆಹೋವನಿಗೆ ಸಮರ್ಪಿಸಬಹುದಾದ ಪಶುವನ್ನು ಯಾವನಾದರೂ ಹರಕೆಮಾಡಿ ಪ್ರತಿಷ್ಠಿಸಿದ್ದಾದರೆ ಅದು ದೇವರ ಸೊತ್ತಾಗಿರಬೇಕು.
ಪಾಪಿಗಳನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಯೆಹೋವನಲ್ಲಿ ನಿರಂತರವಾಗಿ ಭಯಭಕ್ತಿಯುಳ್ಳವನಾಗಿರು.
¶ ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ.
ಹೌದು, ದೇವದೂತನ ಸಂಗಡ ಹೋರಾಡಿ ಗೆದ್ದನು; ಅಳುತ್ತಾ ಆತನ ಕೃಪೆಯನ್ನು ಬೇಡಿಕೊಂಡನು. ಯೆಹೋವನೆಂಬ ಸೇನಾಧೀಶ್ವರನಾದ ದೇವರು ಅವನನ್ನು ಬೇತೇಲಿನಲ್ಲಿಯು ಕಂಡು ಅಲ್ಲಿ ಅವನೊಡನೆ ಮಾತನಾಡಿದನು.
ಆಗ ಹಗ್ಗಾಯನು ಮುಂದುವರಿಸುತ್ತಾ, ಜನರಿಗೆ ಹೀಗೆಂದನು, “ಯೆಹೋವನು ಇಂತೆನ್ನುತ್ತಾನೆ: ಇದರಂತೆಯೇ ಈ ಪ್ರಜೆ, ಈ ಜನಾಂಗ ಕೈಹಾಕುವ ಪ್ರತಿಯೊಂದು ಕೆಲಸ, ಇಲ್ಲಿಗೆ ತರುವ ಕಾಣಿಕೆ, ನೈವೇದ್ಯ, ಎಲ್ಲವೂ ನನಗೆ ಅಶುದ್ಧವಾಗಿಯೇ ಕಾಣುತ್ತಿದ್ದೆ.
¶ “ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಅವನವನ ಕೆಲಸವು ಪ್ರಕಟವಾಗುವುದು. ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವುದು. ಅವನವನ ಕೆಲಸವೆಂಥದೆಂಬುದನ್ನು ಆ ಬೆಂಕಿ ಶೋಧಿಸುವುದು.
ನೀನು ವಿಚಾರಿಸುವುದಕ್ಕೆ ಮೊದಲೇ ತಪ್ಪುಹೊರಿಸದೆಯೂ, ಪಕ್ಷಪಾತದಿಂದ ಏನೂ ಮಾಡದೆಯೂ, ನಾನು ಹೇಳಿರುವ ಮಾತುಗಳ ಪ್ರಕಾರವೇ ನಡೆಯಬೇಕೆಂದು ದೇವರ ಮುಂದೆಯೂ, ಕ್ರಿಸ್ತ ಯೇಸುವಿನ ಮುಂದೆಯೂ, ಆರಿಸಲ್ಪಟ್ಟಿರುವ ದೇವದೂತರ ಮುಂದೆಯೂ ಖಂಡಿತವಾಗಿ ಹೇಳುತ್ತೇನೆ.
ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.