TSK

TSK · ಪ್ರಸಂಗಿ 7:1

مراجع Treasury of Scripture Knowledge في ಕನ್ನಡ IRV.

العودة إلى المقطع

ಆಕೆಯು ಆ ವರೆಗೂ ಅವನ ಕಾಲುಗಳ ಬಳಿಯಲ್ಲೇ ಮಲಗಿಕೊಂಡಿದ್ದಳು. ಒಬ್ಬ ಹೆಂಗಸು ಕಣಕ್ಕೆ ಬಂದಿದ್ದಳೆಂಬುವುದು ಯಾರಿಗೂ ಗೊತ್ತಾಗಬಾರದೆಂದು ಅವನು ಹೇಳಿದ್ದರಿಂದ ಗುರುತು ಹಿಡಿಯಲಾರದಷ್ಟು ಕತ್ತಲಿರುವಾಗಲೇ ಆಕೆಯು ಎದ್ದಳು.

ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,

ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.

ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.

ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.

ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!

ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ, ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು.

ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.

ಇದನ್ನು ಕುರಿತು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿ ಇರುವುದೇ ಉತ್ತಮವೆಂದು ಎಣಿಸುವವರಾಗಿದ್ದೇವೆ.

ನಮ್ಮ ಹಿರಿಯರು ತಮ್ಮ ನಂಬಿಕೆಯಿಂದಲೇ ದೈವಸಮ್ಮತಿಯನ್ನು ಪಡೆದರು.

¶ ಪರಲೋಕದಿಂದ ಒಂದು ಧ್ವನಿಯು ನನಗೆ ಕೇಳಿಸಿತು. ಅದು, “ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬುದಾಗಿ ಬರೆ” ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು, “ಹೌದು, ಅವರು ಧನ್ಯರೇ. ಅವರು ತಮ್ಮ ಶ್ರಮೆಗಳಿಂದ ಮುಕ್ತರಾಗಿ ವಿಶ್ರಮಿಸಿಕೊಳ್ಳುತ್ತಾರೆ ಮತ್ತು ಅವರ ಸುಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ” ಎಂದು ಹೇಳುತ್ತಾನೆ.