ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.
TSK
TSK · ಪ್ರಸಂಗಿ 7:9
مراجع Treasury of Scripture Knowledge في ಕನ್ನಡ IRV.
ಯಾಕೋಬನ ಗಂಡುಮಕ್ಕಳು ತಂಗಿಯ ಸಂಗತಿಯನ್ನು ಕೇಳಿ ಅಡವಿಯಿಂದ ಬಂದಾಗ ವ್ಯಸನಪಟ್ಟು ಬಹಳ ಕೋಪಗೊಂಡರು. ಶೆಕೆಮನು ಯಾಕೋಬನ ಮಗಳ ಮಾನಭಂಗ ಮಾಡಿ ಇಸ್ರಾಯೇಲರೊಳಗೆ ಬಹಳ ಅವಮಾನಕರವಾದ ಕೆಲಸವನ್ನು ಮಾಡಿದನು.
¶ ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.
ಆಗ ದಾವೀದನ ಅಣ್ಣನಾದ ಶಿಮ್ಮನ ಮಗ ಯೋನಾದಾಬನು ದಾವೀದನಿಗೆ, “ರಾಜಪುತ್ರರೆಲ್ಲರನ್ನೂ ಕೊಂದು ಹಾಕಿದ್ದಾರೆಂದು ನನ್ನ ಒಡೆಯನು ನೆನಸದಿರಲಿ. ಅಮ್ನೋನನೊಬ್ಬನೇ ಸತ್ತಿರಬೇಕು. ಅವನು ಅಬ್ಷಾಲೋಮನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಾಗಿನಿಂದ ಹೀಗಾಗುವುದೆಂದು ಅಬ್ಷಾಲೋಮನ ಮುಖದಿಂದಲೇ ತೋರುತ್ತಿತ್ತು.
¶ ಮೊರ್ದೆಕೈಯು ತನಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿಲ್ಲವೆಂದು ತಿಳಿದ ಹಾಮಾನನು ಬಹಳ ಕೋಪಗೊಂಡನು.
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.
ಕೆಟ್ಟ ಹೃದಯದಿಂದ ಪ್ರೀತಿಯನ್ನಾಡುವ ತುಟಿಯು, ಬೆಳ್ಳಿ ಲೇಪನ ಮಾಡಿದ ಮಣ್ಣಿನ ಮಡಿಕೆಯ ಹಾಗೆ.
ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
ಇದರಿಂದ ಹೆರೋದ್ಯಳು ಸಹ ಯೋಹಾನನ ಮೇಲೆ ದ್ವೇಷವಿಟ್ಟುಕೊಂಡು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಸಾಧ್ಯವಾಗಲಿಲ್ಲ.
“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.