ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.
TSK
TSK · ಪ್ರಸಂಗಿ 8:12
مراجع Treasury of Scripture Knowledge في ಕನ್ನಡ IRV.
ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.
¶ ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
ಆತನು ದುಷ್ಟರ ಮೇಲೆ ತನ್ನ ಕೋಪವನ್ನು ತೀರಿಸದೆ ಇರುವ ಕಾರಣ ಆಹಾ, ಆತನು ದ್ರೋಹವನ್ನು ವಿಶೇಷವಾಗಿ ಗಮನಿಸುವುದಿಲ್ಲವೆಂದು,
ಯೆಹೋವನು ನಿರ್ದೋಷಿಗಳ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವತ್ತು ಶಾಶ್ವತವಾಗಿ ನಿಲ್ಲುವುದು.
ಯೆಹೋವನಿಗೆ ಸ್ತೋತ್ರ! ಯಾರು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಆಜ್ಞೆಗಳಲ್ಲಿ ಅತ್ಯಾನಂದಪಡುವನೋ ಅವನೇ ಧನ್ಯನು.
ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.
ಕೆಟ್ಟದನ್ನು ಮಾಡುವುದಕ್ಕೆ ಯಾವಾಗಲೂ ಭಯಪಡುವವನು ಧನ್ಯನು, ಕಠಿಣಹೃದಯನು ಕೇಡಿಗೆ ಸಿಕ್ಕಿಬೀಳುವನು.
ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು?
ನೀನು ಇದನ್ನು ಹಿಡಿದುಕೊಳ್ಳುವುದು ಒಳ್ಳೆಯದು, ಅದರಿಂದ ಕೈಯನ್ನು ಹಿಂತೆಗೆಯಬೇಡ. ದೇವರಿಗೆ ಭಯಪಡುವವನು ಅವೆಲ್ಲವುಗಳಿಂದ ಪಾರಾಗುವನು.
ಹೀಗಿರಲು ಕರ್ತನಾದ ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಸೇವಕರು ಊಟಮಾಡುವರು, ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ನೀವು ದಾಹಗೊಳ್ಳುವಿರಿ; ಇಗೋ, ನನ್ನ ಸೇವಕರು ಉಲ್ಲಾಸಗೊಳ್ಳುವರು, ನೀವು ಆಶಾಭಂಗಪಡುವಿರಿ.
ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ನೇಮಿಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.
‹ಆ ಮೇಲೆ ಆತನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.›
ನೀನು ನಿನ್ನ ಮೊಂಡತನವನ್ನೂ, ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸಿ ನ್ಯಾಯತೀರ್ಪಿನ ದಿನದವರೆಗೂ ನಿನಗಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಾ ಇದ್ದೀ.
ಕರ್ತನು ಭಕ್ತರನ್ನು ಕಷ್ಟಗಳಿಂದ ರಕ್ಷಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವನಾಗಿದ್ದಾನೆ.