ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.
TSK
TSK · ಎಸ್ತೇರಳು 1:4
مراجع Treasury of Scripture Knowledge في ಕನ್ನಡ IRV.
ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.
ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.
ಹೀಗೆ ಮಾನವರು ನಿನ್ನ ಶೂರಕೃತ್ಯಗಳನ್ನೂ, ನಿನ್ನ ರಾಜ್ಯದ ಮಹಾಪ್ರಭಾವವನ್ನೂ ಗ್ರಹಿಸಿಕೊಳ್ಳುವರು.
ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.”
“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.
ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.
ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,
ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.
ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.