ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು.
TSK
TSK · ಎಸ್ತೇರಳು 10:3
مراجع Treasury of Scripture Knowledge في ಕನ್ನಡ IRV.
ಈ ಬರಗಾಲ ಮುಗಿಯುವುದಕ್ಕೆ ಇನ್ನೂ ಐದು ವರ್ಷ ಹೋಗಬೇಕು. ಆದ್ದರಿಂದ ನಿನಗೂ, ನಿನ್ನ ಮನೆಯವರಿಗೂ ನಿನಗಿರುವ ಎಲ್ಲವುಗಳಿಗೂ ಬಡತನವುಂಟಾಗದಂತೆ ಇಲ್ಲಿ ನಿನ್ನನ್ನು ಪೋಷಿಸುವೆನೆಂದು’ ಹೇಳುತ್ತಾನೆ ಎಂಬುದಾಗಿ ತಿಳಿಸಿರಿ.
ದಾವೀದನಿಗೆ, “ಭಯಪಡಬೇಡ; ನೀನು ನನ್ನ ತಂದೆಯಾದ ಸೌಲನ ಕೈಗೆ ಸಿಕ್ಕಿಬೀಳುವುದಿಲ್ಲ. ನೀನು ಇಸ್ರಾಯೇಲ್ಯರ ಅರಸನಾಗುವಿ; ನಾನು ನಿನಗೆ ಎರಡನೆಯವನಾಗಿರುವೆನು. ಹೀಗಾಗುವುದೆಂದು ನನ್ನ ತಂದೆಯಾದ ಸೌಲನೂ ತಿಳಿದುಕೊಂಡಿದ್ದಾನೆ” ಎಂದು ಹೇಳಿ, ದೇವರಲ್ಲಿ ಅವನನ್ನು ಬಲಪಡಿಸಿದನು.
¶ ಇಸ್ರಾಯೇಲರ ಹಿತಚಿಂತಕನೊಬ್ಬನು ಬಂದಿದ್ದಾನೆಂಬ ವರ್ತಮಾನವು ಹೋರೋನ್ ಪಟ್ಟಣದವನಾದ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ದಾಸನಿಗೂ ತಲುಪಿದಾಗ ಅವರು ಬಹಳವಾಗಿ ಹೊಟ್ಟೆಕಿಚ್ಚುಪಟ್ಟರು.
ರಾಜನ ಅರಮನೆಯಲ್ಲಿದ್ದ ಸೇವಕರೆಲ್ಲರೂ ಹಾಮಾನನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿದ್ದರು; ಆದರೆ ಮೊರ್ದೆಕೈಯು ಅವನಿಗೆ ಸಾಷ್ಟಾಂಗನಮಸ್ಕಾರ ಮಾಡುತ್ತಿರಲಿಲ್ಲ.
ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ನನಗೆ ಹೆಚ್ಚಾದ ದುಃಖವೂ, ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.
ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.