ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಚಾಚು, ಆಗ ಐಗುಪ್ತ ದೇಶದಲ್ಲೆಲ್ಲಾ ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಹೊಲದಲ್ಲಿರುವ ಎಲ್ಲಾ ಪೈರುಗಳ ಮೇಲೆಯೂ ಆನೆಕಲ್ಲಿನ ಮಳೆ ಬೀಳುವುದು” ಎಂದು ಹೇಳಿದನು.
TSK
TSK · ವಿಮೋಚನಕಾಂಡ 10:21
مراجع Treasury of Scripture Knowledge في ಕನ್ನಡ IRV.
ಬೇರೆ ಯಾವ ದೇವರೂ ಮನಪರಿಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ, ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವುದಕ್ಕೆ ಪ್ರಯತ್ನಿಸಿದ್ದಾನೇ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣು ಮುಂದೆ ನಡಿಸಿದ್ದಾನಲ್ಲಾ.
ಅವರು ಹಗಲಿನಲ್ಲೇ ಕತ್ತಲೆಯಿಂದ ಸುತ್ತುವರೆದು, ಮಧ್ಯಾಹ್ನದಲ್ಲೇ ರಾತ್ರಿಯವರಂತೆ ತಡಕಾಡುತ್ತಾರೆ.
ಆತನು ಅವರ ಮೇಲೆ ತನ್ನ ಕೋಪರೌದ್ರಗಳನ್ನು, ಉಗ್ರಹಿಂಸೆಗಳನ್ನು ಸಂಹಾರಕ ದೂತಗಣವನ್ನೋ ಎಂಬಂತೆ ಕಳುಹಿಸಿದನು.
ದುಷ್ಟರ ಮಾರ್ಗವೋ ಕತ್ತಲಿನಂತಿದೆ; ತಾವು ಯಾವುದಕ್ಕೆ ಎಡವಿಬಿದ್ದೆವೆಂದು ಅವರಿಗೆ ಗೊತ್ತಾಗದು.
ಅದು ವ್ಯರ್ಥವಾಗಿ ಬರುತ್ತದೆ. ಕತ್ತಲಲ್ಲಿ ಮರೆಯಾಗುತ್ತದೆ. ಅಂಧಕಾರವು ಅದರ ಹೆಸರನ್ನು ಕವಿದಿರುತ್ತದೆ.
ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು.
¶ ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
¶ ಇಷ್ಟರಲ್ಲಿ ಸುಮಾರು ನಡುಮಧ್ಯಾಹ್ನವಾಯಿತು. ಸೂರ್ಯನು ಕಾಂತಿಗುಂದಿ, ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು. ಇದಲ್ಲದೆ ದೇವಾಲಯದ ಪರದೆಯು ನಡುವೆ ಹರಿದು ಹೋಯಿತು.
ಇವರು ನೀರಿಲ್ಲದ ಹಾಳು ಬಾವಿಗಳೂ, ಬಿರುಗಾಳಿಯಿಂದ ಬಡಿಸಿಕೊಂಡು ಹಾರಿಹೋಗುವ ಮೋಡಗಳೂ ಆಗಿದ್ದಾರೆ. ಇಂಥವರಿಗಾಗಿ ಕಗ್ಗತ್ತಲೆಯನ್ನು ಸಂಗ್ರಹಿಸಿ ಇಡಲಾಗಿದೆ.
ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚುತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರಗಳಾದ ಇವರ ಪಾಲಿಗೆ ಕಗ್ಗತ್ತಲೆಯು ಸದಾಕಾಲಕ್ಕೆ ಇಡಲ್ಪಟ್ಟಿದೆ.