ಜನರು ದೂರದಲ್ಲಿ ನಿಂತಿದ್ದರು. ಮೋಶೆಯು ದೇವರಿರುವ ಆ ಕಾರ್ಗತ್ತಲಿನ ಸಮೀಪಕ್ಕೆ ಹೋದನು.
TSK
TSK · ವಿಮೋಚನಕಾಂಡ 10:22
مراجع Treasury of Scripture Knowledge في ಕನ್ನಡ IRV.
¶ ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.
ಆತನು ಕತ್ತಲೆಯನ್ನು ಕಳುಹಿಸಲು ಕತ್ತಲೆಯಾಯಿತು. ಐಗುಪ್ತ್ಯರು ಆತನ ಆಜ್ಞೆಗಳನ್ನು ಅನುಸರಿಸಲಿಲ್ಲ.
ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.
ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.
ಇಗೋ, ಪರ್ವತಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ತನ್ನ ಸಂಕಲ್ಪವನ್ನು ಮನುಷ್ಯರಿಗೆ ವ್ಯಕ್ತಗೊಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ ಮತ್ತು ಭೂಮಿಯ ಉನ್ನತ ಪ್ರದೇಶಗಳನ್ನು ತುಳಿದುಬಿಡುವಾತನು” ಸೇನಾಧೀಶ್ವರ ದೇವರಾದ ಯೆಹೋವನೆಂಬುದೇ ನನ್ನ ನಾಮಧೇಯ.