ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.
TSK
TSK · ವಿಮೋಚನಕಾಂಡ 13:9
مراجع Treasury of Scripture Knowledge في ಕನ್ನಡ IRV.
¶ ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆ
¶ ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು.
ನೀವು ಅವರಿಗೆ, “ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆಮಾಡಿದನು.
ಈ ವಾಕ್ಯವು ನಿಮ್ಮ ಸಮೀಪದಲ್ಲಿಯೇ ಇದೆ; ಇದು ನಿಮ್ಮ ಬಾಯಲ್ಲಿಯೂ ಮತ್ತು ಹೃದಯದಲ್ಲಿಯೂ ಇದೆ; ಇದನ್ನು ಅನುಸರಿಸುವುದಕ್ಕೆ ಅವಕಾಶವುಂಟಷ್ಟೆ.
ತಮ್ಮ ಪೂರ್ವಿಕರನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ, ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಯೆಹೋವನಿಗೆ ಸಿಟ್ಟು ಬರುವಂತೆ ಮಾಡಿದರು.
ನಿನ್ನ ಭುಜಬಲವು ಮಹಾಬಲವುಳ್ಳದ್ದು. ನಿನ್ನ ಹಸ್ತವು ಶಕ್ತಿಯುಳ್ಳದ್ದು; ನಿನ್ನ ಬಲಗೈ ಮಹತ್ತುಗಳನ್ನು ನಡೆಸುತ್ತದೆ.
ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.
ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.
ಪಕ್ಷಿಯು ಬಲೆಯ ಕಡೆಗೆ ಓಡುವಂತೆಯೂ, ಅವನು ತನ್ನ ಪ್ರಾಣಾಪಾಯವನ್ನು ತಿಳಿಯದೆ, ಬಾಣವು ತನ್ನ ಕಾಳಿಜವನ್ನು ತಿವಿಯುವ ಮೇರೆಗೂ, ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.
¶ ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; “ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ.
ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರು ಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.
‹ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ›‹ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.›
ಆದ್ದರಿಂದ ಉಪದ್ರವಗಳು ಮರಣ, ಗೋಳಾಟ ಮತ್ತು ಕ್ಷಾಮಗಳು ಒಂದೇ ದಿನದಲ್ಲಿ ಅವಳಿಗೆ ಸಂಭವಿಸುವವು. ಅವಳಿಗೆ ತೀರ್ಪುಕೊಡುವ ಕರ್ತನಾದ ದೇವರು ಶಕ್ತನಾಗಿರುವುದರಿಂದ ಅವಳು ಬೆಂಕಿಯಿಂದ ನಾಶವಾಗುವಳು.