TSK

TSK · ವಿಮೋಚನಕಾಂಡ 14:8

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಮೋಶೆಗೆ ಇಂತೆಂದನು, “ನೀನು ಐಗುಪ್ತ ದೇಶಕ್ಕೆ ಹಿಂತಿರುಗಿ ಬಂದಾಗ ನಾನು ನಿನ್ನ ಕೈಯಿಂದ ಮಾಡಿದ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನು. ಆದ್ದರಿಂದ ಅವನು ಜನರನ್ನು ಹೋಗಲು ಬಿಡುವುದಿಲ್ಲ.

ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.

ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.

ನೀವು ಐಗುಪ್ತ್ಯರಿಗೆ ಗುಲಾಮರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದವನು ನಾನು.

ಆತನು ತನ್ನ ಭುಜಬಲವನ್ನೂ, ಶಿಕ್ಷಾಹಸ್ತವನ್ನೂ, ಮಹಾಭೀತಿಗಳನ್ನೂ, ಮಹತ್ಕಾರ್ಯಗಳನ್ನೂ ಮತ್ತು ಸೂಚಕಕಾರ್ಯಗಳನ್ನು ಪ್ರಯೋಗಿಸಿ ನಮ್ಮನ್ನು ಬಿಡಿಸಿದನು.

ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲರು ಅವರೆಲ್ಲರನ್ನು ಕರುಣೆಯಿಲ್ಲದೆ ಸಂಹರಿಸಿ ಬಿಡುವ ಹಾಗೆ ಯೆಹೋವನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರುವಂತೆ ಮಾಡಿದನು.

ನೀನು ಬಹಳವಾಗಿ ಕನಿಕರಿಸಿ, ನನ್ನ ಪ್ರಾಣವನ್ನು ಪಾತಾಳದ ತಳದಿಂದ ತಪ್ಪಿಸಿದ್ದಿಯಲ್ಲಾ.

“ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.