¶ ಅದಕ್ಕೆ ಯೆಹೋವನು, “ನೀನು ಏನು ಮಾಡಿದೆ? ನಿನ್ನ ತಮ್ಮನ ರಕ್ತವು ಭೂಮಿಯ ಕಡೆಯಿಂದ ಕೂಗಿ ನನಗೆ ಮೊರೆಯಿಡುತ್ತಿದೆ.
TSK
TSK · ವಿಮೋಚನಕಾಂಡ 2:23
مراجع Treasury of Scripture Knowledge في ಕನ್ನಡ IRV.
¶ ಇದಲ್ಲದೆ ಯೆಹೋವನು, “ಸೊದೋಮ್ ಗೊಮೋರಗಳ ದೊಡ್ಡ ಮೊರೆ ನನಗೆ ಮುಟ್ಟಿತು; ಆ ಊರಿನವರ ಮೇಲೆ ಹೊರಿಸಿರುವ ಪಾಪವು ಎಷ್ಟೋ ಘೋರವಾದದ್ದು,
¶ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
ಅವರು ಫರೋಹನ ಹತ್ತಿರ ಮಾತನಾಡಿದ ಕಾಲದಲ್ಲಿ ಮೋಶೆ ಎಂಬತ್ತು ವರ್ಷದವನೂ ಮತ್ತು ಆರೋನನು ಎಂಭತ್ತಮೂರು ವರ್ಷದವನೂ ಆಗಿದ್ದರು.
ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.
ಐಗುಪ್ತ್ಯರು ನಮ್ಮನ್ನು ಉಪದ್ರವಪಡಿಸಿ, ಬಾಧಿಸಿ, ನಮ್ಮಿಂದ ಕಠಿಣವಾಗಿ ದುಡಿಸಿಕೊಂಡರು.
ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರ್ಷಗಳ ಕಾಲ ಕಠಿಣವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.
ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.
ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.
ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.
ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.
¶ ಹೆರೋದನು ತೀರಿಹೋದ ಮೇಲೆ ಐಗುಪ್ತದೇಶದಲ್ಲಿ ಕರ್ತನ ದೂತನು ಯೋಸೇಫನಿಗೆ ಕನಸಿನಲ್ಲಿ ಕಾಣಿಸಿಕೊಂಡು,
ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.