ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.
TSK
TSK · ವಿಮೋಚನಕಾಂಡ 2:24
مراجع Treasury of Scripture Knowledge في ಕನ್ನಡ IRV.
ನಾನು ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದೂ ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.
ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,
ಆ ರಾತ್ರಿ ಅವನು ಒಂದು ಕನಸು ಕಂಡನು. ಆ ಕನಸಿನಲ್ಲಿ ಒಂದು ಏಣಿಯು ಭೂಮಿಯ ಮೇಲೆ ನಿಂತಿತು. ಅದರ ತುದಿ ಆಕಾಶವನ್ನು ಮುಟ್ಟಿತು. ಅದರ ಮೇಲೆ ದೇವ ದೂತರು ಏರುತ್ತಾ ಇಳಿಯುತ್ತಾ ಇದ್ದರು.
¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
ನಾನು ಅಬ್ರಹಾಮ ಮತ್ತು ಇಸಾಕರಿಗೆ ವಾಗ್ದಾನ ಮಾಡಿದ ದೇಶವನ್ನು ನಿನಗೂ ನಿನ್ನ ತರುವಾಯ ಬರುವ ನಿನ್ನ ಸಂತತಿಯವರಿಗೂ ಕೊಡುವೆನು” ಎಂದು ಹೇಳಿದನು.
ಐಗುಪ್ತರು ದಾಸರಾಗಿ ಮಾಡಿಕೊಂಡಿರುವ ಇಸ್ರಾಯೇಲರ ಗೋಳು ಈಗ ನನಗೆ ಕೇಳಿಸಿತು. ನಾನು ಮಾಡಿದ ವಾಗ್ದಾನವನ್ನು ಪುನಃ ನೆನಪುಮಾಡಿಕೊಂಡೆನು.
ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
ಆದರೂ ಯೆಹೋವನು ಅವರನ್ನು ಸಂಪೂರ್ಣವಾಗಿ ಹಾಳುಮಾಡಲಿಲ್ಲ. ಅವರನ್ನು ಈ ಕಾಲದಲ್ಲಿಯೂ ತನ್ನ ಸನ್ನಿಧಿಯಿಂದ ತಳ್ಳಿಬಿಡಲಿಲ್ಲ. ತಾನು ಅಬ್ರಹಾಮ್, ಇಸಾಕ್, ಯಾಕೋಬರೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ನೆನಪು ಮಾಡಿಕೊಂಡು ಅವರಿಗೆ ದಯೆ ತೋರಿಸಿ, ಅವರ ಮೇಲೆ ಅನುಕಂಪಗೊಂಡನು.
ಆದ್ದರಿಂದ ನೀನು ಅವರನ್ನು ದಂಡಿಸುವ ವಿರೋಧಿಗಳ ಕೈಗೆ ಒಪ್ಪಿಸಿದೆ. ಅವರು ತಮ್ಮ ಕಷ್ಟಕಾಲದಲ್ಲಿ ನಿನಗೆ ಮೊರೆಯಿಡಲು ಪರಲೋಕದಿಂದ ನೀನು ಅವರಿಗೆ ಕಿವಿಗೊಟ್ಟು ನಿನ್ನ ಕರುಣಾತಿಶಯದಿಂದ ರಕ್ಷಕರನ್ನು ಕಳುಹಿಸಿ ವಿರೋಧಿಗಳ ಕೈಯಿಂದ ಅವರನ್ನು ಪಾರುಮಾಡಿದೆ.
ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.
ನನ್ನ ಕಷ್ಟದಲ್ಲಿ ವಿಮುಖನಾಗಬೇಡ; ನನ್ನ ಮೊರೆಗೆ ಕಿವಿಗೊಡು; ನಾನು ಕೂಗಿಕೊಳ್ಳುವ ದಿನದಲ್ಲಿ ಬೇಗನೆ ಸದುತ್ತರವನ್ನು ದಯಪಾಲಿಸು.
ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ, ನೀವು ನೆನಪುಮಾಡಿಕೊಳ್ಳಿರಿ.
ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು; ಇಸಾಕನಿಗೆ ತನ್ನ ವಾಗ್ದಾನಗಳನ್ನು ಕೊಟ್ಟನು.
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.