¶ ಆಗ ಸ್ತ್ರೀಯು ಆ ಮರದ ಹಣ್ಣು ತಿನ್ನುವುದಕ್ಕೆ ಉತ್ತಮವಾಗಿಯೂ, ನೋಡುವುದಕ್ಕೆ ರಮ್ಯವಾಗಿಯೂ, ಜ್ಞಾನೋದಯಕ್ಕೆ ಅಪೇಕ್ಷಿಸತಕ್ಕದ್ದಾಗಿಯೂ ಇದೆ ಎಂದು ತಿಳಿದು ಅದನ್ನು ತೆಗೆದುಕೊಂಡು ತಿಂದಳು ಮತ್ತು ಸಂಗಡ ಇದ್ದ ಗಂಡನಿಗೂ ಕೊಡಲೂ, ಅವನೂ ತಿಂದನು.
TSK
TSK · ವಿಮೋಚನಕಾಂಡ 20:17
مراجع Treasury of Scripture Knowledge في ಕನ್ನಡ IRV.
ಅವರ ಕುರಿದನಗಳೂ, ಅವರ ಆಸ್ತಿಯೂ ಅವರ ಎಲ್ಲಾ ಪಶುಪ್ರಾಣಿಗಳೂ ನಮ್ಮದಾಗುವುದಲ್ಲವೇ? ಆದುದರಿಂದ ಅವರು ನಮ್ಮಲ್ಲಿ ವಾಸಮಾಡುವ ಹಾಗೆ ನಾವು ಅವರ ಮಾತಿಗೆ ಒಪ್ಪಿಕೊಳ್ಳೋಣ” ಎಂದು ಹೇಳಿದನು.
ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು.
“ಕನ್ಯೆಯನ್ನು ಕೆಟ್ಟದೃಷ್ಟಿಯಿಂದ ನೋಡುವುದಿಲ್ಲ ಎಂದು ನನ್ನ ಕಣ್ಣುಗಳೊಡನೆ ನಿಬಂಧನೆಯನ್ನು ಮಾಡಿಕೊಂಡಿದ್ದೇನೆ,
ದುಷ್ಟನು ತನ್ನ ಹೃದಯದ ಸಂಕಲ್ಪಗಳು ನೆರವೇರಿತೆಂದು ಕೊಚ್ಚಿಕೊಳ್ಳುತ್ತಾನೆ; ಲಾಭಬಡುಕನು ಯೆಹೋವನನ್ನು ದೂಷಿಸಿ ತಿರಸ್ಕರಿಸುತ್ತಾನೆ.
ನಿನ್ನ ಹೃದಯವನ್ನು ಬಹು ಜಾಗರೂಕತೆಯಿಂದ ಕಾಪಾಡಿಕೋ, ಅದರೊಳಗಿಂದ ಜೀವಬುಗ್ಗೆಗಳು ಹೊರಡುವವು.
ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು.
ಕೊಬ್ಬಿ ಅತ್ತಿತ್ತ ಓಡಾಡುವ ಕುದುರೆಗಳಂತೆ ಅವರಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹೆಂಡತಿಯನ್ನು ನೋಡಿ ಮೋಹಿಸುತ್ತಿದ್ದನು.
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
ಹೊಲಗದ್ದೆಗಳನ್ನು ದುರಾಶೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಮನೆಗಳನ್ನು ಲೋಭದಿಂದ ಅಪಹರಿಸುತ್ತಾರೆ. ಮನೆಯನ್ನೂ, ಮನೆಯವನನ್ನೂ ಮತ್ತು ಅವನ ಸ್ವತ್ತನ್ನೂ ತುಳಿದುಬಿಡುತ್ತಾರೆ.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ಪರಸ್ತ್ರೀಯನ್ನು ನೋಡಿ ಮೋಹಿಸುವ ಪ್ರತಿಯೊಬ್ಬ ಮನುಷ್ಯನು ಆಗಲೇ ತನ್ನ ಮನಸ್ಸಿನಲ್ಲಿ ಆಕೆಯ ಕೂಡ ವ್ಯಭಿಚಾರ ಮಾಡಿದವನಾಗಿದ್ದಾನೆ.›
ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
ಆ ಆಸ್ತಿ ಮೊದಲು ನಿನ್ನದಾಗಿಯೇ ಇತ್ತಲ್ಲವೇ. ಮಾರಿದ ಮೇಲೆ ಬಂದ ಹಣವು ನಿನ್ನ ಅಧೀನದಲ್ಲೇ ಇತ್ತಲ್ಲವೇ, ನೀನು ಈ ಕಾರ್ಯವನ್ನು ನಿನ್ನ ಹೃದಯದಲ್ಲಿ ಯೋಚಿಸಿಕೊಂಡದ್ದು ಏಕೆ? ನೀನು ಸುಳ್ಳಾಡಿದ್ದು ಮನುಷ್ಯರಿಗಲ್ಲ, ದೇವರಿಗೆ” ಅಂದನು.
¶ ಹಾಗಾದರೆ ಏನು ಹೇಳೋಣ? ಧರ್ಮಶಾಸ್ತ್ರವು ಪಾಪಸ್ವರೂಪವೋ? ಎಂದಿಗೂ ಅಲ್ಲ. ಧರ್ಮಶಾಸ್ತ್ರವಿಲ್ಲದಿದ್ದರೆ ಪಾಪವೆಂದರೆ ಏನೆಂದು ನನಗೆ ಗೊತ್ತಾಗುತ್ತಿರಲಿಲ್ಲ. ದೃಷ್ಟಾಂತವಾಗಿ “ದುರಾಶೆ ಪಾಪವೆಂದು” ಎಂದು ಧರ್ಮಶಾಸ್ತ್ರವು ಹೇಳದಿದ್ದರೆ ದುರಾಶೆಯಂದರೆ ಏನೆಂದು ನನಗೆ ತಿಳಿಯುತ್ತಿರಲಿಲ್ಲ.
ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
¶ ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.