TSK

TSK · ವಿಮೋಚನಕಾಂಡ 22:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಹೀಗೆ ಬಹಳ ದಿನಗಳು ಕಳೆದ ನಂತರ ಐಗುಪ್ತ ದೇಶದ ಅರಸನು ಸತ್ತನು. ಇಸ್ರಾಯೇಲರು ತಾವು ಮಾಡಬೇಕಾದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಾ ಇದ್ದರು. ಆ ಗೋಳು ದೇವರಿಗೆ ಮುಟ್ಟಿತು.

¶ ಯೆಹೋವನು ಮೋಶೆಗೆ ಎದುರಾಗಿ ಹೋಗುತ್ತಾ ಪ್ರಕಟಿಸಿ ಹೇಳಿದ್ದೇನೆಂದರೆ; “ಯೆಹೋವನೆಂಬ ದೇವರು ಕರುಣಾಳುವು, ಕೃಪಾಳುವು, ದೀರ್ಘಶಾಂತವುಳ್ಳವನು, ಪ್ರೀತಿಯುಳ್ಳವನು ಹಾಗು ನಂಬಿಗಸ್ತನಾದ ದೇವರು ಆಗಿದ್ದೇನೆ;

ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, ‘ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ’ ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.

ನೀವು ಯೆಹೋವನ ಕಡೆಗೆ ತಿರುಗಿಕೊಳ್ಳವುದಾದರೆ ನಿಮ್ಮ ಸಹೋದರರೂ, ಮಕ್ಕಳೂ ತಮ್ಮನ್ನು ಸೆರೆ ಒಯ್ದವರ ದೃಷ್ಟಿಯಲ್ಲಿ ದಯೆಗೆ ಪಾತ್ರರಾಗಿ, ತಿರುಗಿ ಸ್ವದೇಶಕ್ಕೆ ಬರುವರು. ನಿಮ್ಮ ದೇವರಾದ ಯೆಹೋವನು ದಯೆಯೂ, ಕನಿಕರವೂ ಉಳ್ಳವನಾಗಿದ್ದಾನೆ. ಆತನು ತನ್ನ ಕಡೆಗೆ ತಿರುಗಿಕೊಳ್ಳುವ ನಿಮ್ಮನ್ನು ಕಟಾಕ್ಷಿಸದೆ ಇರುವುದಿಲ್ಲ.”

ಏಕೆಂದರೆ ಅವನು ಮೊರೆಯಿಡುವ ಬಡವರನ್ನೂ, ದಿಕ್ಕಿಲ್ಲದೆ ಕುಗ್ಗಿದವರನ್ನೂ ಉದ್ಧರಿಸುವನು.

ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.

ಅವು ಐಗುಪ್ತ ದೇಶದಲ್ಲಿ ಸೇನಾಧೀಶ್ವರನಾದ ಯೆಹೋವನ ಗುರುತಾಗಿಯೂ, ಸಾಕ್ಷಿಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಯೆಹೋವನನ್ನು ಕೂಗಿಕೊಳ್ಳಲು ಆತನು ಅವರಿಗಾಗಿ ಹೋರಾಡುವ ಶೂರನಾದ ರಕ್ಷಕನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.