ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
TSK
TSK · ವಿಮೋಚನಕಾಂಡ 22:28
مراجع Treasury of Scripture Knowledge في ಕನ್ನಡ IRV.
ಕಳ್ಳನು ಸಿಕ್ಕದೇ ಹೋದರೆ ಆ ಮನೆಯ ಯಜಮಾನನು ತಾನೇ ಆ ಒಡವೆಗಳನ್ನು ಕದ್ದನೋ ಇಲ್ಲವೋ ಎಂಬುದನ್ನು ದೃಢಪಡಿಸುವುದಕ್ಕಾಗಿ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
ನಿಮ್ಮ ಬೆಳೆಯ ಪ್ರಥಮಫಲದಲ್ಲಿ ಅತಿ ಶ್ರೇಷ್ಠವಾದದ್ದನ್ನು ನಿಮ್ಮ ದೇವರಾದ ಯೆಹೋವನ ಮಂದಿರಕ್ಕೆ ತರಬೇಕು. ಹೋತ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.
ಅವನು ತನ್ನ ಜನರಿಗೆ, “ಅವನು ಯೆಹೋವನಿಂದ ಅಭಿಷೇಕಿಸಲ್ಪಟ್ಟವನೂ, ನನ್ನ ಒಡೆಯನೂ ಆಗಿದ್ದಾನೆ. ನಾನು ನಿಮ್ಮ ಮಾತು ಕೇಳಿ ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತದಂತೆ ಯೆಹೋವನೇ ನನಗೆ ಅಡ್ಡಿ ಮಾಡಲಿ” ಎಂದು ಹೇಳಿದನು
ಆದರೆ ದಾವೀದನು, “ಅವನನ್ನು ಕೊಲ್ಲಬೇಡ, ಯೆಹೋವನ ಅಭಿಷಿಕ್ತನಿಗೆ ವಿರೋಧವಾಗಿ ಕೈಯೆತ್ತುವ ಯಾವನಾದರೂ ನಿರಪರಾಧಿಯೆಂದು ಪರಿಗಣಿಸಲ್ಪಡುವುದಿಲ್ಲ?” ಅಂದನು.
ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
ಮನಸ್ಸಿನಲ್ಲಿಯೂ ಅರಸನನ್ನು ದೂಷಿಸದಿರು. ಮಲಗುವ ಕೋಣೆಯಲ್ಲಿಯೂ ಧನಿಕನನ್ನು ಬಯ್ಯದಿರು. ಆಕಾಶದ ಹಕ್ಕಿಯು ಆ ಶಬ್ದವನ್ನು ಮುಟ್ಟಿಸುವವು; ಪಕ್ಷಿಯು ಆ ವಿಷಯವನ್ನು ತಿಳಿಸುವುದು.
“ಸುಣ್ಣ ಬಳಿದ ಗೋಡೆಯೇ, ದೇವರು ನಿನ್ನನ್ನು ಹೊಡೆಯುವನು. ನೀನು ಧರ್ಮಶಾಸ್ತ್ರನುಸಾರವಾಗಿ, ನನ್ನನ್ನು ವಿಚಾರಣೆಮಾಡುವುದಕ್ಕೆ ಕುಳಿತುಕೊಂಡು ಧರ್ಮಶಾಸ್ತ್ರದ ವಿರುದ್ಧವಾಗಿ ನನ್ನನ್ನು ಹೊಡೆಯುವುದಕ್ಕೆ ಅಪ್ಪಣೆಕೊಡುತ್ತೀಯೋ?” ಅಂದನು.
ಆದುದರಿಂದ ಅಧಿಕಾರಕ್ಕೆ ಎದುರುಬೀಳುವವನು ದೇವರ ನೇಮವನ್ನು ಎದುರಿಸುತ್ತಾನೆ. ಎದುರಿಸುವವರು ಶಿಕ್ಷೆಗೊಳಗಾಗುವರು.
ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಗೌರವಿಸಿರಿ.
ಹೀಗಿದ್ದರೂ ಈ ಜನರು ಅದೇ ರೀತಿಯಾಗಿ ಸ್ವಪ್ನಾವಸ್ಥೆಯಲ್ಲಿರುವವರಂತೆ ತಮ್ಮ ಶರೀರವನ್ನು ಮಲಿನಮಾಡಿಕೊಳ್ಳುತ್ತಾರೆ. ಪ್ರಭುತ್ವವನ್ನು ಅಸಡ್ಡೆಮಾಡುತ್ತಾರೆ. ಮಹಾ ಪದವಿಯವರನ್ನು ದೂಷಿಸುತ್ತಾರೆ.