ನಿಮ್ಮ ದೇವರಾದ ಯೆಹೋವನಲ್ಲಿಯೇ ಭಯಭಕ್ತಿಯುಳ್ಳವರಾಗಿರಬೇಕು, ಆತನನ್ನೇ ಸೇವಿಸಬೇಕು ಮತ್ತು ಆತನ ಹೆಸರು ಹೇಳಿ ಪ್ರಮಾಣಮಾಡಬೇಕು.
TSK
TSK · ವಿಮೋಚನಕಾಂಡ 23:25
مراجع Treasury of Scripture Knowledge في ಕನ್ನಡ IRV.
ನಿಮ್ಮಲ್ಲಿ ಯಾವ ವ್ಯಾಧಿಯೂ ಉಂಟಾಗದಂತೆ ಯೆಹೋವನು ಮಾಡುವನು. ನಿಮ್ಮ ಅನುಭವಕ್ಕೆ ಬಂದ ಪ್ರಕಾರ ಐಗುಪ್ತದೇಶದಲ್ಲಿ ಪ್ರಬಲವಾಗಿರುವ ಕ್ರೂರವ್ಯಾಧಿಗಳನ್ನು ನಿಮಗೆ ಬರಗೊಡಿಸದೆ, ಅವುಗಳನ್ನು ನಿಮ್ಮ ಶತ್ರುಗಳ ಮೇಲೆಯೇ ಬರಮಾಡುವನು.
ನಿಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ, ಆತನನ್ನೇ ಸೇವಿಸಬೇಕು; ಆತನನ್ನು ಹೊಂದಿಕೊಂಡು, ಆತನ ಹೆಸರಿನ ಮೇಲೆಯೇ ಪ್ರಮಾಣಮಾಡಬೇಕು.
ಆತನು ಹೇಳುವ ಮಾರ್ಗದಲ್ಲೇ ನೀವು ನಡೆದು, ಆತನಲ್ಲಿಯೇ ಭಯಭಕ್ತಿಯುಳ್ಳವರಾಗಿ, ಆತನ ಆಜ್ಞೆಗಳನ್ನೇ ಅನುಸರಿಸಿ, ಆತನಿಗೇ ವಿಧೇಯರಾಗಿ, ಆತನನ್ನೇ ಸೇವಿಸುತ್ತಾ ಹೊಂದಿಕೊಂಡಿರಬೇಕು.
ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ
ಜನರು ಯೆಹೋಶುವನಿಗೆ, “ಇಲ್ಲ, ನಾವು ಯೆಹೋವನನ್ನೇ ಸೇವಿಸುವೆವು” ಎಂದರು.
ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.
ನೀವಾದರೋ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿದ್ದು, ಆತನು ನಿಮಗೋಸ್ಕರವಾಗಿ ಮಾಡಿದ ಮಹತ್ಕಾರ್ಯಗಳನ್ನು ಸ್ಮರಿಸಿಕೊಂಡು, ಆತನನ್ನು ಸತ್ಯದಿಂದಲೂ, ಪೂರ್ಣಮನಸ್ಸಿನಿಂದಲೂ ಸೇವಿಸುತ್ತಾ ಬರಬೇಕು;
ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.
ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
ಯೇಸು ಅವನಿಗೆ, ‹“ಸೈತಾನನೇ, ನೀನು ತೊಲಗಿ ಹೋಗು. ‘ನಿನ್ನ ದೇವರಾಗಿರುವ ಕರ್ತನನ್ನು ಮಾತ್ರ ಆರಾಧಿಸಬೇಕು ಆತನೊಬ್ಬನನ್ನೇ ಸೇವಿಸಬೇಕು’›‹ಎಂಬುದಾಗಿ ಬರೆದಿದೆಯಲ್ಲಾ”› ಎಂದು ಹೇಳಿದನು.