¶ ಸುಳ್ಳು ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರೊಂದಿಗೆ ಸೇರಿ ಸುಳ್ಳು ಸಾಕ್ಷಿಯನ್ನು ಹೇಳಬಾರದು.
TSK
TSK · ವಿಮೋಚನಕಾಂಡ 23:7
مراجع Treasury of Scripture Knowledge في ಕನ್ನಡ IRV.
¶ “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.
¶ “ಅವರು, ಹಣ ತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತನು” ಎನ್ನಲಾಗಿ ಜನರೆಲ್ಲರೂ, “ಆಮೆನ್” ಅನ್ನಬೇಕು.
ಜೀವವನ್ನು ತೆಗೆಯಬೇಕೆಂದು ನೀತಿವಂತರ ಮೇಲೆ ಬೀಳುತ್ತಾರೆ; ನಿರಪರಾಧಿಗಳಿಗೆ ಮರಣಶಿಕ್ಷೆ ವಿಧಿಸುತ್ತಾರೆ.
ದುಷ್ಟನಿಗೆ ದಂಡನೆ ಖಂಡಿತ, ಶಿಷ್ಟವಂಶಕ್ಕೆ ರಕ್ಷಣೆ.
ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ!
ಯೆಹೋವನು ದೀರ್ಘಶಾಂತನಾಗಿದ್ದರೂ ಆತನ ಶಕ್ತಿಯು ಅಪಾರ, ಅಪರಾಧಿಗಳನ್ನು ಶಿಕ್ಷಿಸದೆ ಬಿಡನು; ಯೆಹೋವನು ಬಿರುಗಾಳಿಯಲ್ಲಿಯೂ, ತುಫಾನಿನಲ್ಲಿಯೂ ನಡೆಯುತ್ತಾನೆ; ಮೋಡಗಳು ಆತನ ಹೆಜ್ಜೆಯಿಂದೇಳುವ ಧೂಳು.
¶ ಅನೀತಿಯಿಂದ ಸತ್ಯವನ್ನು ಅಡ್ಡಿಮಾಡುವವರಾದ ದುಷ್ಟಮನುಷ್ಯರ ಎಲ್ಲಾ ವಿಧವಾದ ಭಕ್ತಿಹೀನತೆಯ ಮೇಲೆಯೂ, ದುಷ್ಟತನದ ಮೇಲೆಯೂ ದೇವರ ಕೋಪವು ಪರಲೋಕದಿಂದ ಇಳಿದುಬರುತ್ತದೆ,
¶ ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.