ಅನಂತರ ಮೋಶೆ ಆ ರಕ್ತದಲ್ಲಿ ಅರ್ಧವನ್ನು ತೆಗೆದುಕೊಂಡು ಬಟ್ಟಲುಗಳಲ್ಲಿ ತುಂಬಿ ಅರ್ಧವನ್ನು ಯಜ್ಞವೇದಿಯ ಮೇಲೆ ಪ್ರೋಕ್ಷಿಸಿದನು.
TSK
TSK · ವಿಮೋಚನಕಾಂಡ 24:8
مراجع Treasury of Scripture Knowledge في ಕನ್ನಡ IRV.
ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.
ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು. ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು.
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.
‘ನೀವು ಐಗುಪ್ತದಿಂದ ಪಾರಾಗಿ ಬಂದಾಗ, ನಾನು ನಿಮಗೆ ವಾಗ್ದಾನವಾಗಿ ಕೊಟ್ಟ ಮಾತನ್ನು ನೆರವೇರಿಸುವೆನು; ನನ್ನ ಆತ್ಮನು ನಿಮ್ಮ ಮಧ್ಯದಲ್ಲಿ ನೆಲೆಗೊಂಡಿರುವನು; ಹೆದರಬೇಡಿರಿ.’
‹ಇದು ಬಹು ಜನರ ಪಾಪಗಳ ಕ್ಷಮಾಪಣೆಗಾಗಿ ಸುರಿಸಲ್ಪಡುವ ಹೊಸ ›‹ಒಡಂಬಡಿಕೆಯ ರಕ್ತ.›
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು, ‹“ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ, ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.›
ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.
ಯಾಕೆಂದರೆ ಹೋರಿಗಳ ಮತ್ತು ಕುರಿಗಳ ರಕ್ತದಿಂದ ಪಾಪಗಳನ್ನು ಪರಿಹಾರಮಾಡುವುದು ಅಸಾಧ್ಯವಾಗಿದೆ.
ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ, ವಿಧೇಯರಾಗುವುದಕ್ಕಾಗಿ, ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗಿ, ತಂದೆಯಾದ ದೇವರ ಭವಿಷ್ಯದ ಜ್ಞಾನಾನುಸಾರವಾಗಿ ಆರಿಸಿಕೊಳಲ್ಪಟ್ಟವರಿಗೆ ಬರೆಯುವುದೇನೆಂದರೆ ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ಉಂಟಾಗಲಿ.