ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.
TSK
TSK · ವಿಮೋಚನಕಾಂಡ 28:41
مراجع Treasury of Scripture Knowledge في ಕನ್ನಡ IRV.
ಆರೋನನಿಗೂ ಅವನ ಮಕ್ಕಳಿಗೂ ನಡುಕಟ್ಟುಗಳನ್ನು ಕಟ್ಟಿಸಿ ಮುಂಡಾಸಗಳನ್ನು ಇಡಬೇಕು. ಅಂದಿನಿಂದ ಯಾಜಕತ್ವವು ಅವರಿಗೆ ಶಾಶ್ವತವಾದ ಹಕ್ಕಾಗಿರುವುದು. ಹೀಗೆ ಆರೋನನೂ ಅವನ ಮಕ್ಕಳೂ ಯಾಜಕ ಸೇವೆಗೆ ಪ್ರತಿಷ್ಠಿತರಾಗಿರುವರು.
¶ ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.
ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.
ಸುಗಂಧ ದ್ರವ್ಯ ತಯಾರಿಸುವವರ ಕೌಶಲ್ಯಕ್ಕೆ ತಕ್ಕಂತೆ ಕಲಿಸಿ ಉಪ್ಪು ಹಾಕಿ ದೇವರ ಸೇವೆಗೆ ಪವಿತ್ರವಾದ ಧೂಪದ್ರವ್ಯವನ್ನು ಮಾಡಿಸಬೇಕು.
¶ ಯೆಹೋವನು ಮೋಶೆಯೊಂದಿಗೆ ಮಾತನಾಡಿ,
ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.
ಮೋಶೆಯು ಕೋರಹನಿಗೂ ಮತ್ತು ಅವನ ಎಲ್ಲಾ ಸಮೂಹದವರಿಗೂ, “ತನ್ನವರು ಯಾರು ಎಂಬುದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ, ಯಾರನ್ನು ಆದುಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.
ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.
ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದವರಾಗಿದ್ದೀರಿ ಎಂಬ ಸತ್ಯವನ್ನೂ ತಿಳಿದವರಾಗಿದ್ದೀರಿ.