TSK

TSK · ವಿಮೋಚನಕಾಂಡ 29:12

مراجع Treasury of Scripture Knowledge في ಕನ್ನಡ IRV.

العودة إلى المقطع

ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿಸಬೇಕು. ಆ ಕೊಂಬುಗಳು ಯಜ್ಞವೇದಿಯಿಂದಲೇ ಬಂದವುಗಳಾಗಿರಬೇಕು. ಆ ಯಜ್ಞವೇದಿಗೆ ತಾಮ್ರದ ತಗಡುಗಳನ್ನು ಹೊದಿಸಬೇಕು.

ಅದರ ನಾಲ್ಕು ಮೂಲೆಗಳಲ್ಲಿ ನಾಲ್ಕು ಕೊಂಬುಗಳನ್ನು ಮಾಡಿದನು; ಅವು ಯಜ್ಞವೇದಿಯಿಂದಲೇ ಮಾಡಲ್ಪಟ್ಟಿದ್ದವು. ಆ ವೇದಿಗೆ ತಾಮ್ರದ ತಗಡುಗಳನ್ನು ಹೊದಿಸಿದನು.

ಆ ರಕ್ತದಲ್ಲಿ ಸ್ವಲ್ಪವನ್ನು ದೇವದರ್ಶನದ ಗುಡಾರದೊಳಗೆ ಯೆಹೋವನ ಸನ್ನಿಧಿಯಲ್ಲಿರುವ ಧೂಪವೇದಿಯ ಕೊಂಬುಗಳಿಗೆ ಹಚ್ಚಿ ಉಳಿದದ್ದನ್ನೆಲ್ಲಾ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿರುವ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಯಾಜಕನು ಅದರ ರಕ್ತದಲ್ಲಿ ಸ್ವಲ್ಪವನ್ನು ಬೆರಳಿನಿಂದ ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡದಲ್ಲಿ ಸುರಿದುಬಿಡಬೇಕು.

ಆಗ ಅವನು ದೋಷಪರಿಹಾರಾರ್ಥವಾದ ಆ ಪಕ್ಷಿಯ ರಕ್ತದಲ್ಲಿ ಸ್ವಲ್ಪವನ್ನು ಯಜ್ಞವೇದಿಯ ಪಕ್ಕಕ್ಕೆ ಚಿಮುಕಿಸಿ ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಸುರಿಯಬೇಕು. ಅದು ದೋಷಪರಿಹಾರಕ ಯಜ್ಞ.

ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು.

ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಹಾಗೂ ಆ ಹೋತದ ರಕ್ತದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.

ಧರ್ಮಶಾಸ್ತ್ರದ ಪ್ರಕಾರ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು. ರಕ್ತಧಾರೆ ಇಲ್ಲದೆ ಪಾಪ ಕ್ಷಮಾಪಣೆಯು ಉಂಟಾಗುವುದಿಲ್ಲ.