TSK

TSK · ವಿಮೋಚನಕಾಂಡ 29:27

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.

ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.

ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.

ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.

¶ ಜನರ ಕಡೆಯಿಂದ ಯಾಜಕರು ಹೊಂದಬೇಕಾದವುಗಳು ಯಾವುವೆಂದರೆ: ದನಗಳಲ್ಲಿಯಾಗಲಿ, ಆಡು ಮತ್ತು ಕುರಿಗಳಲ್ಲಿಯಾಗಲಿ ಪಶುವನ್ನು ಕೊಯಿದು ಯಜ್ಞಮಾಡುವವರೆಲ್ಲರೂ ಅದರ ಮುಂದೊಡೆಯನ್ನೂ, ಎರಡು ದವಡೆಗಳನ್ನೂ, ಕೋಷ್ಠವನ್ನೂ (ಒಳಭಾಗವನ್ನು) ಯಾಜಕರಿಗೆ ಕೊಡಬೇಕು.

ಧರ್ಮಶಾಸ್ತ್ರವು ದುರ್ಬಲರಾದ ಮನುಷ್ಯರನ್ನು ಮಹಾಯಾಜಕರನ್ನಾಗಿ ನೇಮಕ ಮಾಡುತ್ತದೆ. ಆದರೆ ಧರ್ಮಶಾಸ್ತ್ರದ ತರುವಾಯ ಪ್ರತಿಜ್ಞೆಯೊಡನೆ ಬಂದ ವಾಕ್ಯವು ಸದಾಕಾಲಕ್ಕೂ ಸರ್ವಸಂಪೂರ್ಣನಾಗಿರುವ ಮಗನನ್ನೇ ಯಾಜಕನನ್ನಾಗಿ ನೇಮಕ ಮಾಡಿದೆ.