TSK

TSK · ವಿಮೋಚನಕಾಂಡ 29:33

مراجع Treasury of Scripture Knowledge في ಕನ್ನಡ IRV.

العودة إلى المقطع

ಪವಿತ್ರಸ್ಥಳದೊಳಗೇ ಅದನ್ನು ಊಟಮಾಡಬೇಕು. ಜನರು ಯೆಹೋವನಿಗೆ ಸಮರ್ಪಿಸಿದ ಹೋಮದ್ರವ್ಯಗಳಲ್ಲಿ ಅದು ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲತಕ್ಕದ್ದೆಂದು ಅಪ್ಪಣೆಯಾಗಿದೆ.

¶ “‘ಯಾಜಕನಲ್ಲದೆ ಇತರರು ನೈವೇದ್ಯದ ಪದಾರ್ಥವನ್ನು ಊಟಮಾಡಬಾರದು. ಯಾಜಕನ ಬಳಿಯಲ್ಲಿರುವ ಅತಿಥಿಯಾಗಲಿ ಅಥವಾ ಕೂಲಿಯಾಳಾಗಲಿ ಅದನ್ನು ಊಟಮಾಡಬಾರದು.

ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

¶ ದೇವದರ್ಶನದ ಗುಡಾರದ ಪೂರ್ವ ದಿಕ್ಕಿನಲ್ಲಿ ಅಂದರೆ ಸೂರ್ಯೋದಯವಾಗುವ ದಿಕ್ಕಿನಲ್ಲಿ ಮೋಶೆ, ಆರೋನನೂ ಮತ್ತು ಅವನ ಮಕ್ಕಳೂ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಅವರು ಇಸ್ರಾಯೇಲರಿಗೋಸ್ಕರವಾಗಿ ದೇವಸ್ಥಾನವನ್ನು ನೋಡಿಕೊಳ್ಳಬೇಕು. ಇತರರು ಆ ಕೆಲಸಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಆರೋನನ ಸಂತಾನಕ್ಕೆ ಸೇರದ ಬೇರೆ ಜನರು ಯೆಹೋವನ ಸನ್ನಿಧಿಗೆ ಬಂದು ಧೂಪವನ್ನು ಸಮರ್ಪಿಸಬಾರದು. ಸಮರ್ಪಿಸಿದರೆ ಕೋರಹನಿಗೂ ಮತ್ತು ಅವನ ಸಮೂಹದವರಿಗೂ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವುದಕ್ಕೆ ಗುರುತಾಯಿತು.

ನೀನೂ, ನಿನ್ನ ಸಂತತಿಯವರೂ ಯಾಜಕೋದ್ಯೋಗವನ್ನು ಕೈಕೊಂಡವರಾಗಿ ಯಜ್ಞವೇದಿಯ ಮತ್ತು ತೆರೆಯ ಒಳಗಿನ ಕಾರ್ಯಗಳನ್ನು ನಡೆಸಬೇಕು. ಅವುಗಳ ಸೇವಾಕಾರ್ಯವನ್ನು ನೀವೇ ಮಾಡಬೇಕು. ನಾನು ಯಾಜಕತ್ವವನ್ನು ನಿಮಗೆ ದಾನವಾಗಿ ಅನುಗ್ರಹಿಸಿದ್ದೇನೆ. ಇತರರು ಅದಕ್ಕೆ ಕೈಹಾಕಿದರೆ ಅವರಿಗೆ ಮರಣಶಿಕ್ಷೆಯಾಗಬೇಕು” ಎಂದನು.

ಅದಕ್ಕೆ ಯೇಸು ಅವರಿಗೆ, ‹“ನಿಮಗೆ ನಿಜ ನಿಜವಾಗಿ ಹೇಳುತ್ತೇನೆ; ನೀವು ಮನುಷ್ಯಕುಮಾರನ ದೇಹವನ್ನು ತಿಂದು ಮತ್ತು ಆತನ ರಕ್ತವನ್ನು ಕುಡಿಯದೆ ಹೋದರೆ, ನಿಮ್ಮಲ್ಲಿ ನಿತ್ಯಜೀವವಿರುವುದಿಲ್ಲ.›

ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.