ಅವರು ತಂದ ಧಾನ್ಯನೈವೇದ್ಯ ದ್ರವ್ಯಗಳಲ್ಲಿ ಒಂದು ಹಿಡಿಯನ್ನು ತೆಗೆದುಕೊಂಡು, ಹೊತ್ತಾರೆಯ ಸರ್ವಾಂಗಹೋಮದ ಸಂಗಡ ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಿದನು.
TSK
TSK · ವಿಮೋಚನಕಾಂಡ 29:38
مراجع Treasury of Scripture Knowledge في ಕನ್ನಡ IRV.
ಅವರು ಪ್ರತಿದಿನವೂ ಪ್ರಾತಃಕಾಲ ಮತ್ತು ಸಾಯಂಕಾಲಗಳಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಮಾಡಿ ಯೆಹೋವನ ಧರ್ಮಶಾಸ್ತ್ರದಲ್ಲಿ ಇಸ್ರಾಯೇಲರಿಗೆ ವಿಧಿತವಾದದ್ದೆಲ್ಲವನ್ನೂ ನೆರವೇರಿಸಬೇಕಾಯಿತು.
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.
ಅದರ ಮಂಟಪದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ನಂದಿಸಿದರು. ಇಸ್ರಾಯೇಲ್ ದೇವರ ಪವಿತ್ರ ಸ್ಥಾನದಲ್ಲಿ ಧೂಪಹಾಕುವುದನ್ನೂ, ಸರ್ವಾಂಗಹೋಮ ಸಮರ್ಪಿಸುವುದನ್ನೂ ನಿಲ್ಲಿಸಿಬಿಟ್ಟರು.
ಅವರು ಸುತ್ತಣ ಪ್ರಾಂತ್ಯಗಳ ಜನರಿಗೆ ಹೆದರಿಕೊಂಡಿದ್ದರಿಂದ ವೇದಿಯನ್ನು ಅದರ ಸ್ಥಳದಲ್ಲಿ ಕಟ್ಟಿ, ಅದರ ಮೇಲೆ ಯೆಹೋವನಿಗೋಸ್ಕರ ಮುಂಜಾನೆಯ ಹಾಗು ಸಾಯಂಕಾಲಗಳ ಸರ್ವಾಂಗಹೋಮಗಳನ್ನು ಅರ್ಪಿಸಿದರು.
¶ “ನೀನು ಪೂರ್ಣಾಂಗವಾದ ವರ್ಷದ ಕುರಿಯನ್ನು ಯೆಹೋವನಿಗೆ ಸರ್ವಾಂಗಹೋಮವಾಗಿ ಪ್ರತಿ ದಿನ ಅರ್ಪಿಸಬೇಕು. ಪ್ರತಿ ದಿನ ಬೆಳಿಗ್ಗೆ ಅದನ್ನು ಅರ್ಪಿಸತಕ್ಕದ್ದು.
ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅವಸರವಾಗಿ ಹಾರಿಬಂದು, ಸಂಧ್ಯಾನೈವೇದ್ಯ ಸಮಯದಲ್ಲಿ ನನ್ನನ್ನು ಸೇರಿದನು.
ನಿತ್ಯಹೋಮವು ನೀಗಿಸಲ್ಪಟ್ಟು, ಹಾಳುಮಾಡುವ ಅಸಹ್ಯ ವಸ್ತುವು ಪ್ರತಿಷ್ಠಿತವಾದ ಮೇಲೆ ಸಾವಿರದ ಇನ್ನೂರತ್ತೊಂಭತ್ತು ದಿನಗಳು ಕಳೆಯಬೇಕು.
ಮೊದಲು ತಮ್ಮ ಪಾಪಪರಿಹಾರಕ್ಕಾಗಿ ಆ ಮೇಲೆ ಜನರ ಪಾಪಪರಿಹಾರಕ್ಕಾಗಿ ಯಜ್ಞ ಸಮರ್ಪಣೆಮಾಡುವ ಲೇವಿ ಮಹಾಯಾಜಕರಂತೆ ಈತನು ಪ್ರತಿದಿನವೂ ಯಜ್ಞಗಳನ್ನು ಸಮರ್ಪಿಸಬೇಕಾದ ಅವಶ್ಯವಿಲ್ಲ. ಏಕೆಂದರೆ ಈತನು ತನ್ನನ್ನು ತಾನೇ ಸಮರ್ಪಿಸಿಕೊಂಡು ಒಂದೇ ಸಾರಿ ಆ ಕೆಲಸವನ್ನು ಮಾಡಿ ಮುಗಿಸಿದನು.
ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.