ಅಮೋರಿಯರೂ, ಕಾನಾನ್ಯರೂ, ಗಿರ್ಗಾಷಿಯರೂ, ಯೆಬೂಸಿಯರೂ ವಾಸವಾಗಿರುವ ದೇಶವನ್ನು ನಾನು ನಿನ್ನ ಸಂತತಿಗೆ ಕೊಟ್ಟಿದ್ದೇನೆ,” ಎಂದು ವಾಗ್ದಾನ ಮಾಡಿದನು.
TSK
TSK · ವಿಮೋಚನಕಾಂಡ 3:17
مراجع Treasury of Scripture Knowledge في ಕನ್ನಡ IRV.
¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
ಆದಕಾರಣ ಅವರನ್ನು ಐಗುಪ್ತ್ಯರ ಕೈಯೊಳಗಿಂದ ಬಿಡಿಸುವುದಕ್ಕೂ ಆ ದೇಶದಿಂದ ಅವರನ್ನು ಹಾಲೂ ಮತ್ತು ಜೇನೂ ಹರಿಯುವ ವಿಸ್ತಾರವಾದ ಒಳ್ಳೆಯ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡೆಸಿಕೊಂಡು ಹೋಗುವುದಕ್ಕೂ ಇಳಿದು ಬಂದಿದ್ದೇನೆ.
ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ನೀನು ಹೋಗು. ಆದರೆ ನಾನು ನಿಮ್ಮ ಸಂಗಡ ಬರುವುದಿಲ್ಲ, ಏಕೆಂದರೆ ನೀವು ಮೊಂಡುತನದ ಜನರು. ನಾನು ದಾರಿಯಲ್ಲಿ ನಿಮ್ಮನ್ನು ಸಂಹರಿಸಿಬಿಟ್ಟೇನು” ಅಂದನು.
ಅವರು ಮೋಶೆಗೆ, “ನೀನು ನಮ್ಮನ್ನು ಕಳುಹಿಸಿದ ದೇಶಕ್ಕೆ ಹೋದೆವು; ಅದು ನಿಜವಾಗಿಯೂ ಹಾಲೂ ಮತ್ತು ಜೇನೂ ಹರಿಯುವ ದೇಶವೇ; ಅಲ್ಲಿನ ಹಣ್ಣುಗಳು ಇಂಥವು.
ಐಗುಪ್ತದಿಂದ ಬಂದ ಇಸ್ರಾಯೇಲ್ಯರು ಯೆಹೋವನ ಮಾತನ್ನು ಕೇಳದೆ ಹೋಗಿದ್ದರಿಂದ ಅವರು ತಮ್ಮ ಭಟರೆಲ್ಲರು ಸಂಹಾರವಾಗುವ ತನಕ ನಲವತ್ತು ವರ್ಷ ಅರಣ್ಯದಲ್ಲೇ ಅಲೆಯುತ್ತಿರಬೇಕಾಯಿತು. ಯೆಹೋವನು ತಾನು ಆ ಜನರ ಪೂರ್ವಿಕರಿಗೆ ವಾಗ್ದಾನ ಮಾಡಿದ್ದ ಹಾಲೂ ಜೇನೂ ಹರಿಯುವ ದೇಶದಲ್ಲಿ ಅವರನ್ನು ಸೇರಿಸುವುದಿಲ್ಲವೆಂದು ಆಣೆಯಿಟ್ಟನು.
ಹಿವ್ವಿಯರೂ, ಅರ್ಕಿಯರೂ, ಸೀನಿಯರೂ,
ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.