¶ “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.
TSK
TSK · ವಿಮೋಚನಕಾಂಡ 30:33
مراجع Treasury of Scripture Knowledge في ಕನ್ನಡ IRV.
ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು.
ಆದಕಾರಣ ನೀವು ಸಬ್ಬತ್ ದಿನವನ್ನು ಪರಿಶುದ್ಧವಾದ ದಿನವೆಂದು ಎಣಿಸಿ ಆಚರಿಸಬೇಕು. ಅದನ್ನು ಅಶುದ್ಧಪಡಿಸುವ ಪ್ರತಿಯೊಬ್ಬನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಯಾವನಾದರೂ ಕೆಲಸವನ್ನು ಮಾಡಿದರೆ ಅವನನ್ನು ಕುಲದಿಂದ ತೆಗೆದುಹಾಕಬೇಕು.
ಯಾವನಿಗಾದರೂ ಮನುಷ್ಯದೇಹದಿಂದ ಉಂಟಾದ ಅಶುದ್ಧವಸ್ತು ಅಥವಾ ಅಶುದ್ಧ ಮೃಗ ಮತ್ತು ನಿಷಿದ್ಧವಸ್ತು ಇವುಗಳಲ್ಲಿ ಯಾವುದಾದರೂ ಸೋಂಕಿದರೆ ಮತ್ತು ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ತನ್ನ ಕುಲದಿಂದ ಬಹಿಷ್ಕರಿಸಲ್ಪಡಬೇಕು’” ಎಂದು ಹೇಳಿದನು.
ಬೇರೆ ವಿಧವಾದ ಯಜ್ಞವನ್ನು ಮಾಡುವಾಗ ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವುದಕ್ಕಾಗಿ ದೇವದರ್ಶನದ ಗುಡಾರದ ಬಾಗಿಲಿಗೆ ತೆಗೆದುಕೊಂಡು ಬಾರದಿದ್ದರೆ ಅವನು ಕುಲದಿಂದ ಹೊರಗೆ ಹಾಕಬೇಕು.
ಏಕೆಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲರಿಗೆ, ಪ್ರತಿಪ್ರಾಣಿಗೂ ರಕ್ತವೇ ಪ್ರಾಣಾಧಾರವಾದುದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನು ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.
ಅದರಲ್ಲಿ ಏನಾದರೂ ತಿಂದವನು ಯೆಹೋವನ ಪವಿತ್ರ ದ್ರವ್ಯವನ್ನು ಹೊಲೆಮಾಡಿದವನಾದುದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನನ್ನು ಕುಲದಿಂದ ಹೊರಗೆ ಹಾಕಬೇಕು.
ಯಾವನಾದರೂ ತನ್ನ ಒಡಹುಟ್ಟಿದವಳನ್ನು ಅಂದರೆ ತಂದೆಯ ಮಗಳನ್ನಾಗಲಿ ಅಥವಾ ತಾಯಿಯ ಮಗಳನ್ನಾಗಲಿ ಕರೆದುಕೊಂಡು ಅವಳ ಮಾನವನ್ನು ಇವನೂ ಹಾಗು ಇವನ ಮಾನವನ್ನು ಅವಳೂ ನೋಡಿದರೆ ಅದು ನಾಚಿಕೆಗೇಡಾದ ಕೆಲಸವಾಗಿರುವುದರಿಂದ ಅವರ ಕುಲದವರ ಎದುರಾಗಿಯೇ ಅವರಿಗೆ ಮರಣಶಿಕ್ಷೆಯನ್ನು ಮಾಡಿಸಬೇಕು. ಆ ಮನುಷ್ಯನು ಒಡಹುಟ್ಟಿದವಳನ್ನು ಸಂಗಮಿಸಿದ್ದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು.
ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.
“ಕೆಹಾತ್ಯರ ಗೋತ್ರಕುಟುಂಬಗಳವರು ಲೇವಿಯರೊಡನೆ ಉಳಿಯದೆ ನಾಶವಾಗುವುದಕ್ಕೆ ಆಸ್ಪದಕೊಡಬೇಡಿರಿ.
ಆದರೆ ಸ್ವದೇಶದವನಾಗಲಿ, ಅನ್ಯದೇಶದವನಾಗಲಿ ಯಾವನಾದರೂ ಮನಃಪೂರ್ವಕವಾಗಿ ಹಟದಿಂದ ಪಾಪವನ್ನು ಮಾಡಿದರೆ ಅವನು ಯೆಹೋವನನ್ನು ದೂಷಿಸಿದವನಾದುದರಿಂದ ಕುಲದಿಂದ ಹೊರಗೆ ಹಾಕಬೇಕು.
ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವನು. ಅಂಥವನನ್ನು ಇಸ್ರಾಯೇಲರಿಂದ ತೆಗೆದುಹಾಕಬೇಕು. ಶುದ್ಧೀಕರಣದ ನೀರನ್ನು ತನ್ನ ಮೇಲೆ ಚಿಮಿಕಿಸಿಕೊಳ್ಳದೆ ಇರುವುದರಿಂದ ಅವನು ಅಶುದ್ಧನು. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.
¶ ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಯೇಸು ಮೊದಲು ತನ್ನ ಶಿಷ್ಯರಿಗೆ ಉಪದೇಶಿಸಿ ಹೇಳಿದ್ದೇನೆಂದರೆ, ‹“ಫರಿಸಾಯರ ಹುಳಿಹಿಟ್ಟಿನ ಬಗ್ಗೆ, ಅಂದರೆ ಅವರ ಕಪಟತನದ ವಿಷಯದಲ್ಲಿ ಜಾಗರೂಕರಾಗಿರಿ.›