TSK

TSK · ವಿಮೋಚನಕಾಂಡ 32:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಗ ಲೋಟನು ಹೊರಕ್ಕೆ ಹೋಗಿ ತನ್ನ ಹೆಣ್ಣುಮಕ್ಕಳನ್ನು ಗೊತ್ತುಮಾಡಿಕೊಂಡಿದ್ದ ಅಳಿಯಂದಿರಿಗೆ ಈ ಸಂಗತಿಯನ್ನು ತಿಳಿಸಿ, “ನೀವೆದ್ದು, ಈ ಸ್ಥಳವನ್ನು ಬಿಟ್ಟು ಹೋಗಿರಿ ಯೆಹೋವನು ಈ ಊರನ್ನು ನಾಶಮಾಡುತ್ತಾನೆ” ಎಂದು ಹೇಳಿದನು. ಆದರೆ ಅವರು ಲೋಟನು ಅಪಹಾಸ್ಯ ಮಾಡುತ್ತಿದ್ದಾನೆ ಎಂದುಕೊಂಡರು.

¶ ಆದರೆ ಅವನು ಒಪ್ಪದೆ, “ನನ್ನ ದಣಿಯು ತನ್ನ ಆಸ್ತಿಯನ್ನೆಲ್ಲಾ ನನ್ನ ವಶಕ್ಕೆ ಒಪ್ಪಿಸಿರುವುದಲ್ಲದೆ ನಾನು ಇಲ್ಲಿ ಇರುವುದರಿಂದ ಮನೆಯೊಳಗೆ ನಡೆಯುವ ಯಾವ ಕೆಲಸವನ್ನೂ ಚಿಂತಿಸದೇ ಇದ್ದಾನೆ.

ಯೋಸೇಫನು ಅವರಿಗೆ, “ನೀವು ಮಾಡಿರುವ ಈ ಕೃತ್ಯವು ಏನು? ನನ್ನಂಥ ಮನುಷ್ಯನು ದೈವೋಕ್ತಿಗಳನ್ನು ಬಲ್ಲೆನೆಂದು ನಿಮಗೆ ತಿಳಿದಿರಲಿಲ್ಲವೋ?” ಎಂದು ಕೇಳಲು,

ಅವರು ಮೋಶೆಗೆ, “ಐಗುಪ್ತ ದೇಶದಲ್ಲಿ ಸಮಾಧಿಗಳಿರಲಿಲ್ಲವೆಂದು ಮರುಭೂಮಿಯಲ್ಲಿ ಸಾಯಲಿ ಎಂದು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದೆಯೋ? ಯಾಕೆ ನೀನು ನಮಗೆ ಈ ರೀತಿಮಾಡಿ ಐಗುಪ್ತ ದೇಶದಿಂದ ಕರೆದುಕೊಂಡು ಬಂದೆ?

ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

¶ ಆಗ ಮೋಶೆ ತನ್ನ ದೇವರಾದ ಯೆಹೋವನನ್ನು ಬೇಡಿಕೊಂಡು, “ಯೆಹೋವನೇ ನೀನು ಮಹಾ ಶಕ್ತಿಯಿಂದಲೂ, ಭುಜಬಲದಿಂದಲೂ ಐಗುಪ್ತ ದೇಶದಿಂದ ಹೊರಗೆ ಕರೆತಂದ ನಿನ್ನ ಪ್ರಜೆಗಳ ಮೇಲೆ ಕೋಪದಿಂದುರಿಯುವುದೇತಕೆ?

ಅವರು ನನ್ನ ಬಳಿಗೆ ಬಂದು, ‘ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ಒಬ್ಬ ದೇವರನ್ನು ಮಾಡಿಸಿಕೊಡು, ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಮೋಶೆಗೆ ಏನಾಯಿತೋ ಗೊತ್ತಿಲ್ಲ’ ಅಂದರು.

¶ ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

¶ ಇಸ್ರಾಯೇಲರೇ ಕೇಳಿರಿ, ನಿಮಗಿಂತ ಮಹಾ ಬಲಿಷ್ಠ ಜನಾಂಗಗಳನ್ನೂ ಮತ್ತು ಆಕಾಶವನ್ನು ಮುಟ್ಟುವ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸ್ವಾಧೀನ ಮಾಡಿಕೊಳ್ಳುವುದಕ್ಕೆ ನೀವು ಈ ಯೊರ್ದನ್ ನದಿಯನ್ನು ಇಂದು ದಾಟಲಿದ್ದೀರಿ.

ಆ ನಲ್ವತ್ತು ದಿನಗಳು ಕಳೆದ ಮೇಲೆ ಯೆಹೋವನು ತನ್ನ ಆಜ್ಞೆಗಳಿರುವ ಆ ಎರಡು ಕಲ್ಲಿನ ಹಲಿಗೆಗಳನ್ನು ನನಗೆ ಕೊಟ್ಟು, “ನೀನು ಬೇಗ ಇಲ್ಲಿಂದ ಹೋಗು;

ನೀನೆದ್ದು ಜನರನ್ನು ಶುದ್ಧೀಕರಿಸು. ನೀನು ಅವರಿಗೆ ‘ಇಸ್ರಾಯೇಲ್ಯರೇ, ನಾಳೆ ನಿಮ್ಮನ್ನು ಶುದ್ಧಪಡಿಸಿಕೊಳ್ಳಿರಿ; ನಿಮ್ಮ ಮಧ್ಯದಲ್ಲಿ ಶಾಪಕ್ಕೆ ಕಾರಣವಾದ ವಸ್ತುವಿದೆ. ನೀವು ಅದನ್ನು ತೆಗೆದುಹಾಕುವ ತನಕ ಶತ್ರುಗಳ ಮುಂದೆ ನಿಲ್ಲಲಾರಿರಿ ಎಂದು ನಿಮ್ಮ ದೇವರಾದ ಯೆಹೋವನು ಹೇಳಿದ್ದಾನೆ.

ಯೆಹೋವನು ಇಸ್ರಾಯೇಲನ್ನು ಪ್ರವಾದಿಯ ಮುಖಾಂತರ ಐಗುಪ್ತದೊಳಗಿಂದ ಪಾರುಮಾಡಿದನು; ಪ್ರವಾದಿಯ ಮೂಲಕ ಅದು ರಕ್ಷಿಸಲ್ಪಟ್ಟಿತು.

‹ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.›

¶ “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು.

ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಹೆಚ್ಚುಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ನೋಡುತ್ತಿದ್ದೀರಿ, ಕೇಳುತ್ತಿದ್ದೀರಿ.