¶ ಅದಕ್ಕೆ ಯೆಹೋವನು, “ನಿನ್ನ ಪ್ರಾರ್ಥನೆಯ ಮೇರೆಗೆ ನಾನು ಅವರನ್ನು ಕ್ಷಮಿಸಿದ್ದೇನೆ.
TSK
TSK · ವಿಮೋಚನಕಾಂಡ 32:14
مراجع Treasury of Scripture Knowledge في ಕನ್ನಡ IRV.
ಅವರನ್ನು ಸಂಪೂರ್ಣವಾಗಿ ನಾಶಮಾಡುತ್ತಿದ್ದೆನು, ಅವರು ಮನುಷ್ಯರ ಜ್ಞಾಪಕದಲ್ಲೂ ಇಲ್ಲದಂತೆ ಮಾಡುತ್ತಿದ್ದೆನು.
ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.
ದೇವರು ಯೆರೂಸಲೇಮನ್ನು ನಾಶಪಡಿಸುವುದಕ್ಕೆ ದೂತರನ್ನು ಕಳುಹಿಸಿದನು. ಆದರೆ ಆ ದೂತನು ನಾಶಪಡಿಸುವುದಕ್ಕಿದ್ದಾಗ ಯೆಹೋವನು ಅದನ್ನು ಕಂಡು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರ ದೂತನಿಗೆ, “ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಯೆಹೋವನ ದೂತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ನಿಂತನು.
ತನ್ನ ಒಡಂಬಡಿಕೆಯನ್ನು ನೆನಪುಮಾಡಿಕೊಂಡು, ತನ್ನ ಕೃಪಾತಿಶಯದಿಂದ ಅವರನ್ನು ಕನಿಕರಿಸಿದನು.
ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.
ನಿಮ್ಮ ಉಡುಪುಗಳನ್ನಲ್ಲ, ನಿಮ್ಮ ಹೃದಯಗಳನ್ನು ಹರಿದುಕೊಳ್ಳಿರಿ. ನಿಮ್ಮ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆತನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಪ್ರೀತಿಯೂ ಉಳ್ಳವನಾಗಿ ತಾನು ವಿಧಿಸುವ ಕೇಡಿಗೆ ಮನಮರುಗುವಂಥವನು.
ಕರ್ತನಾದ ಯೆಹೋವನು ಮನಮರುಗಿ, “ಈ ದರ್ಶನವು ನೆರವೇರುವುದಿಲ್ಲ” ಎಂದನು.
ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.