ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.
TSK
TSK · ವಿಮೋಚನಕಾಂಡ 32:7
مراجع Treasury of Scripture Knowledge في ಕನ್ನಡ IRV.
ಅವನು ಆ ಚಿನ್ನವನ್ನು ತನ್ನ ವಶಕ್ಕೆ ತೆಗೆದುಕೊಂಡು ಹೋರಿಕರುವಿನ ಆಕಾರವನ್ನು ಉಳಿಯಿಂದ ರೂಪಿಸಿ ಎರಕ ಹೊಯ್ಯಿಸಿದನು. ಆಗ ಅವರು “ಇಸ್ರಾಯೇಲರೇ ನೋಡಿರಿ, ಇದೇ ನಿಮ್ಮನ್ನು ಐಗುಪ್ತದೇಶದಿಂದ ಕರೆದುಕೊಂಡು ಬಂದ ದೇವರು” ಎಂದು ಹೇಳಿದರು.
¶ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಐಗುಪ್ತ ದೇಶದಿಂದ ಕರೆದುತಂದ ಈ ಜನರನ್ನು ನಿನ್ನ ಸಂಗಡ ಕರೆದುಕೊಂಡು ಈ ಸ್ಥಳವನ್ನು ಬಿಟ್ಟು, ‘ನಾನು ಅಬ್ರಹಾಮ, ಇಸಾಕ ಮತ್ತು ಯಾಕೋಬರಿಗೆ ಮತ್ತು ನಿಮ್ಮ ಸಂತತಿಯವರಿಗೆ ಕೊಡುವೆನೆಂದು’ ಪ್ರಮಾಣ ಮಾಡಿದ ದೇಶಕ್ಕೆ ಹೊರಟುಹೋಗು.
ನೀನು ಐಗುಪ್ತ ದೇಶದಿಂದ ಕರೆದುಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಬೇಕಾದ ಲೋಹದ ವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ” ಎಂದು ಹೇಳಿದನು.
ಆದರೆ ಅವರು ದ್ರೋಹಿಗಳೇ, ಮಕ್ಕಳಲ್ಲ; ಇದು ಅವರ ದೋಷವು; ಅವರು ವಕ್ರಬುದ್ಧಿಯುಳ್ಳ ಮೂರ್ಖಜಾತಿಯವರು.
ಅವನು ತನ್ನ ತಂದೆಯಾದ ಉಜ್ಜೀಯನಂತೆ ಯೆಹೋವನ ಚಿತ್ತಾನುಸಾರವಾಗಿ ನಡೆದನು. ಆದರೆ ಅವನಂತೆ ಯೆಹೋವನ ಆಲಯವನ್ನು ಪ್ರವೇಶಿಸಲಿಲ್ಲ. ಪ್ರಜೆಗಳಾದರೋ ದುರಾಚಾರಿಗಳಾಗಿಯೇ ಇದ್ದರು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.