ಆದರೆ ಆ ದಿನದಲ್ಲಿ ನಾನೇ, ಭೂಲೋಕದಲ್ಲಿ ಯೆಹೋವನೆಂದು ನೀನು ತಿಳಿದುಕೊಳ್ಳುವಂತೆ ನನ್ನ ಜನರು ವಾಸವಾಗಿರುವ ಗೋಷೆನ್ ಸೀಮೆಯನ್ನು ಪ್ರತ್ಯೇಕಿಸುವೆನು. ಅಲ್ಲಿ ಆ ನೊಣಗಳ ಕಾಟವು ಇರುವುದಿಲ್ಲ.
TSK
TSK · ವಿಮೋಚನಕಾಂಡ 33:16
مراجع Treasury of Scripture Knowledge في ಕನ್ನಡ IRV.
“ಕರ್ತನೇ, ನಿನ್ನ ದೃಷ್ಟಿಯಲ್ಲಿ ದಯೆಯು ನನಗೆ ದೊರಕಿರುವುದಾದರೆ ನೀನೇ ನಮ್ಮ ಜೊತೆಯಲ್ಲಿ ಬರಬೇಕು. ನಮ್ಮ ಜನರು ಮೊಂಡುಬುದ್ಧಿಯವರೇ; ಆದಾಗ್ಯೂ ನೀನು ನಮ್ಮ ಪಾಪಗಳನ್ನೂ, ಅಧರ್ಮಗಳನ್ನು ಕ್ಷಮಿಸಿ ನಿನ್ನ ಸ್ವತ್ತಾಗಿ ನಮ್ಮನ್ನು ಸ್ವೀಕರಿಸಬೇಕು” ಎಂದನು.
ಅಲ್ಲದೆ ಯೆಹೋವನಾದ ನೀನು ಇಸ್ರಾಯೇಲರ ಮಧ್ಯದಲ್ಲಿ ಇರುವ ಸಂಗತಿಯನ್ನು, ನೀನು ಇಸ್ರಾಯೇಲರಿಗೆ ಪ್ರತ್ಯಕ್ಷವಾಗಿ ಕಾಣಿಸಿಕೊಳ್ಳುವುದನ್ನು, ಹಗಲಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಇದ್ದು ಇವರ ಮುಂದೆ ನಡೆದುಹೋಗುವುದಾಗಿ ಹಾಗೂ ನೀನಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಈ ದೇಶದವರು ಕೇಳಿದ್ದಾರೆ.
ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?
ನಿನ್ನ ಇಸ್ರಾಯೇಲಿನ ಪ್ರಜೆಗೆ ಸಮಾನವಾದ ಜನಾಂಗವು ಲೋಕದಲ್ಲಿ ಯಾವುದಿದೆ? ನೀನೇ ಹೋಗಿ ಅದನ್ನು ವಿಮೋಚಿಸಿ, ಸ್ವಪ್ರಜೆಯನ್ನಾಗಿ ಮಾಡಿಕೊಂಡು, ನಿನ್ನ ಹೆಸರನ್ನು ಪ್ರಸಿದ್ಧಪಡಿಸಿಕೊಂಡಿದ್ದಿ, ಐಗುಪ್ತರು ಮೊದಲಾದ ಅನ್ಯಜನರ ಕೈಗೂ ಅವರ ದೇವತೆಗಳ ಕೈಗೂ ಸಿಕ್ಕದಂತೆ ತಪ್ಪಿಸಿ, ರಕ್ಷಿಸಿ, ಅವರ ಎದುರಿನಲ್ಲೇ ನಿನ್ನ ದೇಶಕ್ಕೋಸ್ಕರ ಭಯಂಕರವಾದ ಮಹತ್ಕಾರ್ಯಗಳನ್ನು ನಡಿಸಿದಿ.
ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!
ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.