¶ ಅಬ್ರಾಮನು ಅಡ್ಡಬೀಳಲು ದೇವರು ಅವನ ಸಂಗಡ ಮಾತನಾಡಿ,
TSK
TSK · ವಿಮೋಚನಕಾಂಡ 4:31
مراجع Treasury of Scripture Knowledge في ಕನ್ನಡ IRV.
¶ ಯೋಸೇಫನು ತನ್ನ ಅಣ್ಣತಮ್ಮಂದಿರಿಗೆ, “ನನಗೆ ಅವಸಾನಕಾಲ ಸಮೀಪಿಸಿತು. ಆದರೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ತಾನು ಅಬ್ರಹಾಮ, ಇಸಾಕ್, ಯಾಕೋಬರಿಗೆ ಕೊಡುತ್ತೇನೆಂದು ಪ್ರಮಾಣಮಾಡಿ ಹೇಳಿದ ದೇಶಕ್ಕೆ ನೀವು ಹೋಗಿ ಸೇರುವಂತೆ ಮಾಡುವನು” ಎಂದು ತಿಳಿದುಕೊಳ್ಳಿರಿ.
¶ ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.
ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.
ನೀವು ಅವರಿಗೆ, ‘ಯೆಹೋವನು ಐಗುಪ್ತ್ಯರನ್ನು ಸಂಹರಿಸಿದಾಗ ಐಗುಪ್ತ ದೇಶದಲ್ಲಿದ್ದ ಇಸ್ರಾಯೇಲರ ಮನೆಗಳಲ್ಲಿ ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮ ಮನೆಯವರನ್ನು ಉಳಿಸಿದ್ದರಿಂದ ನಾವು ಯೆಹೋವನ ಪಸ್ಕವೆಂಬ ಈ ಆಚರಣೆಯನ್ನು ನಡೆಸಲೇಬೇಕು ಎಂದು ಹೇಳಬೇಕು’” ಎಂದನು. ಆಗ ಜನರು ತಲೆಬಾಗಿ ಯೆಹೋವನಿಗೆ ನಮಸ್ಕರಿಸಿದರು.
ಆ ಮೇಘಸ್ತಂಭವು ಗುಡಾರದ ಬಾಗಿಲಲ್ಲಿ ನಿಂತಿದ್ದನ್ನು ಜನರೆಲ್ಲರೂ ನೋಡಿ ತಮ್ಮ ತಮ್ಮ ಡೇರೆಗಳ ಬಾಗಿಲಲ್ಲೇ ಅಡ್ಡಬೀಳುತ್ತಿದ್ದರು.
¶ ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.
ಇಸ್ರಾಯೇಲರೆಲ್ಲರೂ ಆಕಾಶದಿಂದ ಬೆಂಕಿ ಕೆಳಗೆ ಇಳಿದು ಬರುವುದನ್ನೂ ಮತ್ತು ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿರುವುದನ್ನು ನೋಡಿದಾಗ, ಜನರು ನೆಲದವರೆಗೆ ಸಾಷ್ಟಾಂಗವೆರಗಿ ಯೆಹೋವನನ್ನು ಆರಾಧಿಸಿ, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾದದ್ದು” ಎಂದು ಕೃತಜ್ಞತಾಸ್ತುತಿ ನಮನ ಮಾಡಿದರು.
ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
ಆಗ ಅವರು ಆತನ ಮಾತನ್ನು ನಂಬಿ ಆತನನ್ನು ಕೀರ್ತಿಸಿದರು.
‹ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.›