¶ ಆಗ ಇಸ್ರಾಯೇಲರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು. ಅವರ ಮುಂದಾಗಿ ಹೋಗುತ್ತಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು.
TSK
TSK · ವಿಮೋಚನಕಾಂಡ 40:34
مراجع Treasury of Scripture Knowledge في ಕನ್ನಡ IRV.
ಆರೋನನು ಇಸ್ರಾಯೇಲರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ, ಅವರು ಮರುಭೂಮಿಯ ಕಡೆಗೆ ನೋಡಲಾಗಿ, ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.
ಆ ಕೃಪಾಸನವನ್ನು ಮಂಜೂಷದ ಮೇಲಿರಿಸಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇರಿಸಬೇಕು
ಮೋಶೆಯು ಆ ಗುಡಾರದೊಳಕ್ಕೆ ಹೋದಕೂಡಲೆ ಮೇಘಸ್ತಂಭವು ಇಳಿದು ಆ ಗುಡಾರದ ಬಾಗಿಲಲ್ಲಿ ನಿಲ್ಲುತ್ತಿತ್ತು ಹಾಗು ಯೆಹೋವನು ಮೋಶೆಯ ಸಂಗಡ ಮಾತನಾಡುತ್ತಿದ್ದನು.
¶ ಇಸ್ರಾಯೇಲರು ದೇವದರ್ಶನದ ಗುಡಾರವನ್ನು ಎತ್ತಿ ನಿಲ್ಲಿಸಿದ ದಿನದಲ್ಲಿ ಮೇಘವು ದೇವದರ್ಶನದ ಗುಡಾರವನ್ನು ಆವರಿಸಿಕೊಂಡಿತು. ಅದು ಸಂಜೆಯಿಂದ ಮುಂಜಾನೆಯವರೆಗೆ ಬೆಂಕಿಯಂತೆ ಕಾಣಿಸುತ್ತಿತ್ತು.
ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.
ಯೆಹೋವನ ತೇಜಸ್ಸು ಆಲಯವನ್ನು ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.
ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.
¶ ಕೂಗುವವನ ಶಬ್ದಕ್ಕೆ ದ್ವಾರದ ಅಸ್ತಿವಾರವು ಕದಲಿದವು ಮತ್ತು ಧೂಮವು ಆಲಯದಲ್ಲೆಲ್ಲಾ ತುಂಬಿತು.
ಆಗ ಯೆಹೋವನ ಮಹಿಮೆಯು ಪೂರ್ವದಿಕ್ಕಿಗೆ ಅಭಿಮುಖವಾಗಿದ್ದ ಬಾಗಿಲಿನ ಮಾರ್ಗವಾಗಿ ಆಲಯವನ್ನು ಪ್ರವೇಶಿಸಿತು.
ಆಗ ಸಮಸ್ತ ಜನಾಂಗಗಳ ಇಷ್ಟವಸ್ತುಗಳು ಬಂದು ಒದಗಲು, ಈ ಆಲಯವನ್ನು ವೈಭವದಿಂದ ತುಂಬಿಸುವೆನು’ ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ದೇವರ ಮಹಿಮೆಯಿಂದಲೂ, ಆತನ ಶಕ್ತಿಯಿಂದಲೂ ಉಂಟಾದ ಹೊಗೆಯಿಂದ ಆ ಆಲಯ ತುಂಬಿತ್ತು. ಆ ಏಳು ಮಂದಿ ದೇವದೂತರ ಕೈಯಲ್ಲಿದ್ದ ಏಳು ಉಪದ್ರವಗಳು ತೀರುವ ತನಕ ಆ ಆಲಯವನ್ನು ಪ್ರವೇಶಿಸುವುದಕ್ಕೆ ಯಾರಿಂದಲೂ ಸಾಧ್ಯವಾಗಲಿಲ್ಲ.
ಪಟ್ಟಣಕ್ಕೆ ಬೆಳಕು ಕೊಡಲು ಸೂರ್ಯನಾಗಲಿ ಚಂದ್ರನಾಗಲಿ ಬೇಕಾಗಿರಲಿಲ್ಲ, ಏಕೆಂದರೆ ಅದಕ್ಕೆ ದೇವರ ಮಹಿಮೆಯೇ ಪ್ರಕಾಶವನ್ನು ಕೊಡುತ್ತಿತ್ತು. ಯಜ್ಞದ ಕುರಿಮರಿಯಾದಾತನೇ ಅದರ ದೀಪವು.