¶ ಆಗ ಯಾಕೋಬನು ಸಿಮೆಯೋನನಿಗೂ ಲೇವಿಗೂ, “ನೀವು ಈ ದೇಶದ ನಿವಾಸಿಗಳಾದ ಕಾನಾನ್ಯರಲ್ಲಿಯೂ ಪೆರಿಜೀಯರಲ್ಲಿಯೂ ನನ್ನ ಹೆಸರನ್ನು ಕೆಡಿಸಿದ್ದರಿಂದ ನನ್ನನ್ನು ಅಪಾಯಕ್ಕೆ ಗುರಿಮಾಡಿದ್ದೀರಿ. ನನಗಿರುವ ಜನರು ಸ್ವಲ್ಪವೇ. ಈ ದೇಶದವರು ಒಟ್ಟಾಗಿ ನನ್ನ ವಿರುದ್ಧ ಯುದ್ಧಕ್ಕೆ ಬಂದು ನನ್ನನ್ನು ಹೊಡೆದರೆ ನಾನೂ ನನ್ನ ಮನೆಯವರೆಲ್ಲರೂ ನಾಶವಾಗುವೆವು” ಎಂದನು.
TSK
TSK · ವಿಮೋಚನಕಾಂಡ 5:21
مراجع Treasury of Scripture Knowledge في ಕನ್ನಡ IRV.
ಮೋಶೆ ಈ ಮಾತುಗಳನ್ನು ಅದೇ ಪ್ರಕಾರವಾಗಿ ಇಸ್ರಾಯೇಲರಿಗೆ ಹೇಳಿದಾಗ, ಅವರ ಮನಸ್ಸು ಕುಗ್ಗಿಹೋದದ್ದರಿಂದಲೂ, ಕಠಿಣವಾಗಿ ದಾಸತ್ವದ ಸೇವೆ ಮಾಡಬೇಕಾಗಿ ಬಂದದ್ದರಿಂದಲೂ ಅವರು ಮೋಶೆಯ ಮಾತಿಗೆ ಕಿವಿಗೊಡಲೇ ಇಲ್ಲ.
ಸೌಲನು ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ನಾಶಮಾಡಿದ್ದರಿಂದ ತಾವು ಅವರ ದ್ವೇಷಕ್ಕೆ ಗುರಿಯಾದೆವೆಂದು ಇಸ್ರಾಯೇಲರು ತಿಳಿದು ಗಿಲ್ಗಾಲಿಗೆ ಬಂದು ಸೌಲನನ್ನು ಕೂಡಿಕೊಂಡರು.
¶ ತಾವು ದಾವೀದನ ಕೋಪಕ್ಕೂ, ಅಸಮಾಧಾನಕ್ಕೂ ಗುರಿಯಾಗಿದ್ದೇವೆ ಎಂದು ತಿಳಿದು ಅಮ್ಮೋನಿಯರು ಬೇತ್ ರೆಹೋಬ್ ಮತ್ತು ಚೋಬಾ ಎಂಬ ಪಟ್ಟಣಗಳಿಂದ ಅರಾಮ್ಯರ ಇಪ್ಪತ್ತು ಸಾವಿರ ಕಾಲಾಳುಗಳನ್ನೂ, ಮಾಕದ ರಾಜನಿಂದ ಸಾವಿರ ಮಂದಿ ಸೈನಿಕರನ್ನೂ ಮತ್ತು ಟೋಬ್ ದೇಶದಿಂದ ಹನ್ನೆರಡು ಸಾವಿರ ದಂಡಾಳುಗಳನ್ನೂ ಹಣಕೊಟ್ಟು ತರಿಸಿದನು
ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.
ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.