TSK

TSK · ವಿಮೋಚನಕಾಂಡ 7:17

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.

ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.

ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲರನ್ನು ಹೊರತಂದಾಗ ನಾನು ಯೆಹೋವನು ಎಂಬುವುದನ್ನು ಐಗುಪ್ತ್ಯರು ತಿಳಿದುಕೊಳ್ಳುವರು” ಅಂದನು.

ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, “ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು” ಎಂದು ಹೇಳಿದನು.

ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ

ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಈ ನದಿಯು ನನ್ನದೇ, ನಾನೇ ಅದನ್ನು ನಿರ್ಮಿಸಿದವನೆಂದು ಅಂದುಕೊಂಡ ಕಾರಣ ಐಗುಪ್ತ ದೇಶವು ಹಾಳಾಗುವುದು. ಆಗ ನಾನೇ ಯೆಹೋವನು’ ಎಂದು ಅವರಿಗೆ ಗೊತ್ತಾಗುವುದು.

ಹೀಗೆ ನಾನು ಐಗುಪ್ತ್ಯರಿಗೆ ದಂಡನೆಗಳನ್ನು ವಿಧಿಸಿ ತೀರಿಸುವಾಗ ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.

“ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ಧ್ವಂಸಗೊಳಿಸಿ, ಆ ದೇಶವನ್ನು ಹಾಳುಮಾಡಿ, ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.

¶ “ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.

ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ಅವನು ನರಜಾತಿಯವರೊಳಗಿಂದ ನೂಕಲ್ಪಟ್ಟನು, ಅವನ ಬುದ್ಧಿಯು ಮೃಗದ ಬುದ್ಧಿಯಂತಾಯಿತು, ಕಾಡು ಕತ್ತೆಗಳೊಂದಿಗೆ ವಾಸಿಸಿದನು. ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಮೇಲೆ ತನಗೆ ಬೇಕಾದವರನ್ನು ನೇಮಿಸುತ್ತಾನೆ ಎಂಬುದು ಅವನಿಗೆ ತಿಳಿದುಬರುವ ತನಕ ದನಗಳಂತೆ ಹುಲ್ಲು ಮೇಯುವುದೇ ಅವನ ಗತಿಯಾಯಿತು, ಆಕಾಶದ ಇಬ್ಬನಿಯು ಅವನ ಮೈಯನ್ನು ತೋಯಿಸುತ್ತಿತ್ತು.

¶ ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು.

¶ ಎರಡನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸಮುದ್ರದಲ್ಲಿ ಸುರಿದನು. ಅದು ಸತ್ತ ಮನುಷ್ಯನ ರಕ್ತದ ಹಾಗಾಯಿತು ಮತ್ತು ಸಮುದ್ರದಲ್ಲಿದ್ದ ಸಕಲ ಜೀವಿಗಳೂ ಸತ್ತವು.