ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.
TSK
TSK · ವಿಮೋಚನಕಾಂಡ 9:16
مراجع Treasury of Scripture Knowledge في ಕನ್ನಡ IRV.
ಯೆಹೋವನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ, ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ, ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನು ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ” ಅಂದನು.
ನೀವು ಐಗುಪ್ತದಿಂದ ಹೊರಟು ಬಂದ ಮೇಲೆ ಯೆಹೋವನು ನಿಮ್ಮ ಮುಂದೆ ಕೆಂಪುಸಮುದ್ರವನ್ನು ಬತ್ತಿಸಿಬಿಟ್ಟಿದ್ದನ್ನೂ, ನೀವು ಯೊರ್ದನಿನ ಆಚೆಯಲ್ಲಿರುವ ಸೀಹೋನ್ ಮತ್ತು ಓಗ್ ಎಂಬ ಅಮೋರಿಯರ ಅರಸರಿಬ್ಬರನ್ನು ನಾಶಮಾಡಿದ್ದನ್ನೂ ಕೇಳಿ
ಅಯ್ಯೋ! ಪರಾಕ್ರಮವುಳ್ಳ ಈ ದೇವರ ಕೈಯಿಂದ ನಮ್ಮನ್ನು ಬಿಡಿಸುವವರು ಯಾರು? ಐಗುಪ್ತ್ಯರನ್ನು ಅರಣ್ಯದಲ್ಲಿ ಸಂಪೂರ್ಣವಾಗಿ ನಾಶಮಾಡಿಬಿಟ್ಟ ದೇವರುಗಳು ಇವರೇ ಅಲ್ಲವೋ!
¶ ಅದೇ ರಾತ್ರಿಯಲ್ಲಿ ಯೆಹೋವನ ದೂತನು ಹೊರಟು ಬಂದು ಅಶ್ಶೂರ್ಯದ ಪಾಳೆಯದಲ್ಲಿ ಒಂದು ಲಕ್ಷದ ಎಂಭತ್ತೈದು ಸಾವಿರ ಸೈನಿಕರನ್ನು ಸಂಹರಿಸಿದನು. ಅಶ್ಶೂರ್ಯರು ಬೆಳಿಗ್ಗೆ ಎದ್ದು ನೋಡಿದಾಗ ಪಾಳೆಯದ ತುಂಬಾ ಹೆಣಗಳು ಬಿದ್ದಿದ್ದವು.
ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕೆಲಸವೆಂದು ಹೇಳಿ, ಆತನ ಕೃತ್ಯಗಳನ್ನು ಆಲೋಚಿಸಿಕೊಳ್ಳುವರು.
ಆತನು ಐಗುಪ್ತ್ಯರ ಚೊಚ್ಚಲ ಮಕ್ಕಳನ್ನು ಸಂಹರಿಸಿದನು, ಆತನ ಪ್ರೀತಿಯು ಶಾಶ್ವತವಾದದ್ದು.
ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?
“ಒಬ್ಬನು ಹರಕೆ ಹೊತ್ತು ತನ್ನ ಹಿಂಡಿನಲ್ಲಿರುವ ಗಂಡುಪಶು ಹಾಗೂ ಕಳಂಕವಾದ ಪಶುವನ್ನು ಯೆಹೋವನಿಗೆ ಯಜ್ಞಮಾಡಿದರೆ ಆ ಮೋಸಗಾರನಿಗೆ ಶಾಪವು ತಟ್ಟಲಿ; ನಾನು ರಾಜಾಧಿರಾಜ, ನನ್ನ ನಾಮವು ಅನ್ಯಜನಾಂಗಗಳ ಭಯಭಕ್ತಿಗೆ ಪಾತ್ರವಾಗಿದೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಆದರೆ ದೇವರು ತನ್ನ ಕೋಪವನ್ನು ತೋರಿಸಿ ತನ್ನ ಶಕ್ತಿಯನ್ನು ಪ್ರಸಿದ್ಧಿಪಡಿಸಬೇಕೆಂದಿದ್ದರೂ ಹಾಗೆ ಮಾಡದೆ ತನ್ನ ಕೋಪಕ್ಕೆ ಗುರಿಯಾದ ನಾಶನಪಾತ್ರರನ್ನು ಬಹು ತಾಳ್ಮೆಯಿಂದ ಸಹಿಸಿಕೊಂಡಿದ್ದಾನೆ.
ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ.