¶ ಆ ಗುಡುಗು, ಮಿಂಚು, ತುತ್ತೂರಿಯ ಧ್ವನಿ, ಹಾಗೂ ಬೆಟ್ಟದಿಂದ ಹೊರಬರುತ್ತಿದ್ದ ಹೊಗೆಯನ್ನು ಜನರೆಲ್ಲರೂ ನೋಡಿ, ನಡುಗುತ್ತಾ ದೂರದಲ್ಲಿ ನಿಂತುಕೊಂಡರು.
TSK
TSK · ವಿಮೋಚನಕಾಂಡ 9:23
مراجع Treasury of Scripture Knowledge في ಕನ್ನಡ IRV.
ನಾನು ಯೆಹೋವನಿಗೆ ಮೊರೆಯಿಡುವೆನು; ಈಗ ಗೋದಿಯ ಸುಗ್ಗಿಯಿದ್ದರೂ ಆತನು ಗುಡುಗನ್ನೂ, ಮಳೆಯನ್ನೂ ಕಳುಹಿಸುವುದರ ಮೂಲಕ ನೀವು ಅರಸನನ್ನು ಕೇಳಿಕೊಂಡದ್ದು ತನ್ನ ದೃಷ್ಟಿಯಲ್ಲಿ ತಪ್ಪು ಎಂಬುದನ್ನು ತೋರಿಸಿಕೊಡುವನು” ಎಂದು ಅವರಿಗೆ ಹೇಳಿ ಯೆಹೋವನಿಗೆ ಮೊರೆಯಿಟ್ಟನು.
ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,
ಯೆಹೋವನ ಮಹಾಧ್ವನಿಯು ಮೇಘಮಂಡಲದಲ್ಲಿ ಕೇಳಿಸುತ್ತದೆ; ಪ್ರಭಾವಸ್ವರೂಪನಾದ ದೇವರು ಗುಡುಗುತ್ತಾನೆ; ಯೆಹೋವನು ಆಕಾಶದ ಜಲರಾಶಿಗಳ ಮೇಲೆ ಇದ್ದಾನೆ.
ಅವರ ದ್ರಾಕ್ಷಾಲತೆಗಳನ್ನು ಆನೆಕಲ್ಲಿನಿಂದಲೂ, ಅತ್ತಿಮರಗಳನ್ನು ಕಲ್ಮಳೆಯಿಂದಲೂ ಹಾಳುಮಾಡಿದನು.
ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?
ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು.
¶ ಮೊದಲನೆಯ ದೇವದೂತನು ತನ್ನ ತುತ್ತೂರಿಯನ್ನೂದಲು ರಕ್ತ ಮಿಶ್ರಿತವಾದ ಆಲಿಕಲ್ಲಿನ ಮಳೆಯೂ ಬೆಂಕಿಯೂ ಭೂಮಿಯ ಮೇಲೆ ಸುರಿಯಿತು. ಭೂಮಿಯ ಮೂರರಲ್ಲಿ ಒಂದು ಭಾಗವು ಸುಟ್ಟು ಹೋಯಿತು. ಮರಗಳಲ್ಲಿ ಮೂರರಲ್ಲೊಂದು ಭಾಗ ಸುಟ್ಟು ಹೋದವು. ಹಸಿರು ಹುಲ್ಲೆಲ್ಲಾ ಸುಟ್ಟು ಹೋಯಿತು.
ಮತ್ತು ಆಕಾಶದಿಂದ ಮನುಷ್ಯರ ಮೇಲೆ ದೊಡ್ಡ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಅಲಿಕಲ್ಲು ಸುಮಾರು ನಲ್ವತ್ತು ಕಿಲೊಗ್ರಾಮಿನಷ್ಟು ತೂಕವಾಗಿತ್ತು. ಆ ಆಲಿಕಲ್ಲಿನ ಮಳೆಯ ಉಪದ್ರವವು ಬಹಳ ವಿಪರೀತವಾದ್ದರಿಂದ ಆ ಮಳೆಯಲ್ಲಿ ಸಿಕ್ಕಿಕೊಂಡ ಮನುಷ್ಯರು ದೇವರನ್ನು ದೂಷಿಸಿದರು.