TSK

TSK · ಯೆಹೆಜ್ಕೇಲನು 13:2

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.

¶ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.

ಆದುದರಿಂದ ಯೆರೂಸಲೇಮಿನ ಈ ಜನರನ್ನು ಆಳುವ ಧರ್ಮನಿಂದಕರೇ, ಯೆಹೋವನ ಮಾತನ್ನು ಕೇಳಿರಿ,

ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ, ಯಾಜಕರು ಅವರಿಂದ ಅಧಿಕಾರ ಹೊಂದಿ ದೊರೆತನ ಮಾಡುತ್ತಾರೆ. ನನ್ನ ಜನರು ಇದನ್ನೇ ಪ್ರೀತಿಸುತ್ತಾರೆ; ಕಟ್ಟಕಡೆಗೆ ನೀವು ಏನು ಮಾಡುವಿರಿ?

ಅವರ ಜ್ಞಾನವು ಎಷ್ಟರದು? ಆದುದರಿಂದ ನಾನು ಇವರ ಹೆಂಡತಿಯರನ್ನು ಅನ್ಯರಿಗೂ ಮತ್ತು ಇವರ ಹೊಲಗದ್ದೆಗಳನ್ನು ಆಕ್ರಮಿಸುವವರಿಗೂ ಕೊಟ್ಟುಬಿಡುವೆನು. ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ. ಪ್ರವಾದಿಗಳಿಂದ ಯಾಜಕರವರೆಗೆ ಸಕಲರೂ ಮೋಸಮಾಡುತ್ತಾರೆ.

ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.

ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.

‘ನೀವು ಬಾಬೆಲಿನ ಅರಸನ ಅಡಿಯಾಳಾಗುವುದಿಲ್ಲ’ ಎಂದು ನಿಮಗೆ ನುಡಿಯುವ ಪ್ರವಾದಿಗಳ ಮಾತುಗಳಿಗೆ ಕಿವಿಗೊಡಬೇಡಿರಿ; ಅವರು ನಿಮಗೆ ಸುಳ್ಳನ್ನು ಸಾರುತ್ತಾರೆ.

¶ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.

¶ ನಾನು ಯೆರೂಸಲೇಮಿನಿಂದ ಬಾಬಿಲೋನಿಗೆ ಸಾಗಿಸಿದ ಸೆರೆಯವರೇ, ನೀವೆಲ್ಲರೂ ಯೆಹೋವನ ವಾಕ್ಯವನ್ನು ಕೇಳಿರಿ.

ಬಾಬೆಲಿನ ಅರಸನು ನಿಮಗೂ ಈ ದೇಶಕ್ಕೂ ವಿರುದ್ಧವಾಗಿ ಬರುವುದಿಲ್ಲ ಎಂದು ನಿಮಗೆ ಸಾರಿದ ನಿಮ್ಮ ಪ್ರವಾದಿಗಳು ಈಗ ಎಲ್ಲಿ?

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!

¶ “ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.

ಆ ನಾಡಿನೊಳಗೆ ಪ್ರವಾದಿಗಳು ಒಳಸಂಚು ಮಾಡಿಕೊಂಡಿದ್ದಾರೆ, ಬೇಟೆಯನ್ನು ಸೀಳುತ್ತಾ ಗರ್ಜಿಸುವ ಸಿಂಹದಂತಿದ್ದಾರೆ, ನರಪ್ರಾಣಿಗಳನ್ನು ನುಂಗಿದ್ದಾರೆ. ಆಸ್ತಿಯನ್ನೂ, ಅಮೂಲ್ಯ ವಸ್ತುಗಳನ್ನೂ ದೋಚಿಕೊಂಡಿದ್ದಾರೆ; ದೇಶದಲ್ಲಿ ಬಹಳ ಮಂದಿಯನ್ನು ವಿಧವೆಯರನ್ನಾಗಿ ಮಾಡಿದ್ದಾರೆ.

¶ “ಈಗ ಯೆಹೋವನ ವಾಕ್ಯವನ್ನು ಕೇಳು ‘ಇಸ್ರಾಯೇಲರಿಗೆ ವಿರುದ್ಧವಾಗಿ ಪ್ರವಾದನೆಮಾಡಬೇಡ. ಇಸಾಕನ ವಂಶಕ್ಕೆ ಖಂಡನೆಯಾಗಿ ಬಾಯಿ ಎತ್ತಬೇಡ’ ಎಂದು ನಿನಗೆ ಹೇಳಿದ ಕಾರಣ ಯೆಹೋವನು ಇಂತೆನ್ನುತ್ತಾನೆ,

ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.

¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.