ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.
TSK
TSK · ಯೆಹೆಜ್ಕೇಲನು 21:25
مراجع Treasury of Scripture Knowledge في ಕನ್ನಡ IRV.
ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.
ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
ಆಹಾ, ಬಹುಜಲಾಶ್ರಯಗಳ ಮಧ್ಯೆ ನಿವಾಸಿನಿಯಾಗಿರುವ ನಗರವೇ, ಧನಭರಿತಪುರವೇ, ನಿನ್ನ ಅಂತ್ಯವು ಬಂದಿದೆ, ನೀನು ಸೂರೆಮಾಡಿದ್ದು ಸಾಕು.
ಅಂತ್ಯವು ಬಂತು, ಅಂತ್ಯವು ಬಂದುಬಿಟ್ಟಿತು, ನಿನ್ನನ್ನು ಚಚ್ಚುವುದಕ್ಕೆ ಎಚ್ಚರಗೊಂಡಿದೆ, ಇಗೋ, ಬಂದೇ ಬಂತು!
ಅಮ್ಮೋನೇ, ಪ್ರವಾದಿಗಳೆಂದು ಹೇಳಿಕೊಳ್ಳುತ್ತಿರುವ ನಿನ್ನವರು ದರ್ಶನವನ್ನು ನೋಡಿದೆವು ಎಂದು ಸುಳ್ಳು ಸುಳ್ಳಾಗಿ ಶಕುನ ಹೇಳುತ್ತಿದ್ದಾರೆ. ಸಮಯವು ಹತ್ತಿರವಾಗಿ, ಅಪರಾಧದ ಕಡೆಗಾಲವು ಸಂಭವಿಸಿ, ಹತರಾಗಿ ಬಿದ್ದಿರುವ ದುಷ್ಟರ ಗತಿಯನ್ನು ನೋಡು! ಜೋಯಿಸರನ್ನು ನಂಬಿದ ನೀನೂ ಆ ದುಷ್ಟರ ಕತ್ತುಗಳ ಮೇಲೆ ಒರಗಿ ಬೀಳುವೆ.
ದಿನವು ಹತ್ತಿರವಾಯಿತು! ಹೌದು, ಯೆಹೋವನ ದಿನವು, ಕಾರ್ಮುಗಿಲಿನ ದಿನವು ಸಮೀಪಿಸಿತು; ಅದು ಜನಾಂಗಗಳಿಗೆ ನ್ಯಾಯತೀರಿಸುವ ಕಾಲವಾಗಿರುವುದು.
ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.