ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
TSK
TSK · ಯೆಹೆಜ್ಕೇಲನು 21:28
مراجع Treasury of Scripture Knowledge في ಕನ್ನಡ IRV.
ಅಮ್ಮೋನ್ಯರನ್ನು ಕುರಿತು ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲಿಗೆ ಮಕ್ಕಳಿಲ್ಲವೋ? ಬಾಧ್ಯನು ಇಲ್ಲವೋ? ಮಲ್ಕಾಮ್ ದೇವತೆಯು ಗಾದಿನ ಸೀಮೆಯನ್ನು ಸ್ವಾಧೀನ ಮಾಡಿಕೊಂಡಿರುವುದೇಕೆ? ಮಲ್ಕಾಮನ ಪ್ರಜೆಗಳು ಗಾದಿನ ಪಟ್ಟಣಗಳಲ್ಲಿ ಏಕೆ ವಾಸಿಸುತ್ತಾರೆ?
ಆದರೆ ಅವನು ಬಾಬೆಲಿನ ಅರಸನ ಮೇಲೆ ತಿರುಗಿಬಿದ್ದು ಕುದುರೆಗಳನ್ನೂ ಮತ್ತು ಬಹಳ ಮಂದಿ ಸೈನಿಕರನ್ನೂ ನಮಗೆ ಒದಗಿಸೆಂದು ಐಗುಪ್ತಕ್ಕೆ ರಾಯಭಾರಿಗಳನ್ನು ಕಳುಹಿಸಿದನು. ಆದರೂ ಇವನು ಗೆಲ್ಲುವನೋ? ಇಂಥಾ ಕೃತ್ಯಗಳನ್ನು ನಡೆಸಿದವನು ಪಾರಾಗುವನೋ? ಒಡಂಬಡಿಕೆಯನ್ನು ಮೀರಿದವನು ತಪ್ಪಿಸಿಕೊಂಡಾನೇ?”
ಅಮ್ಮೋನ್ಯರ ರಬ್ಬಾ ಎಂಬ ಪಟ್ಟಣಕ್ಕೂ, ಯೆಹೂದದೊಳಗೆ ಕೋಟೆ ಕೊತ್ತಲಗಳಿಂದ ಕೂಡಿದ ಯೆರೂಸಲೇಮಿಗೂ ಖಡ್ಗವು ಬರುವುದಕ್ಕೆ ದಾರಿಗಳನ್ನು ಮಾಡು.
ಪೂರ್ವದಲ್ಲಿ ಗಿಬ್ಯದವರು ಕೆಡಿಸಿಕೊಂಡಂತೆ ಎಫ್ರಾಯೀಮ್ಯರು ತಮ್ಮನ್ನು ತೀರಾ ಕೆಡಿಸಿಕೊಂಡಿದ್ದಾರೆ. ದೇವರು ಅವರ ಅಧರ್ಮವನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗೆ ಪ್ರತಿದಂಡನೆ ಮಾಡುವನು.
¶ ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.