‘ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ, ನಾನು ಕೈ ಚಾಚಿ ನ್ಯಾಯವನ್ನು ಸ್ಥಾಪಿಸುವುದಕ್ಕೆ ಮುನ್ನುಗ್ಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;
TSK
TSK · ಯೆಹೆಜ್ಕೇಲನು 21:9
مراجع Treasury of Scripture Knowledge في ಕನ್ನಡ IRV.
ಅವನು ಬಾಣವನ್ನು ಕೀಳಲು ಅದು ಬೆನ್ನಿನಿಂದ ಹೊರಬರುವುದು, ಥಳಥಳಿಸುತ್ತಾ ಅವನ ಪಿತ್ತಕೋಶದೊಳಗಿಂದ ಹೊರಡುತ್ತಿರುವುದು, ಭಯಭ್ರಾಂತಿಗಳು ಅವನನ್ನು ಮುತ್ತಿಕೊಳ್ಳುವವು.
ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು.
ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; ಆಗ ಆತನಿಂದ ಹತರಾಗುವವರು ಬಹು ಜನರು.
ಅವರು, ‘ನಾವು ಎಲ್ಲಿಗೆ ಹೋಗೋಣ?’ ಎಂದು ನಿನ್ನನ್ನು ಕೇಳಲು ನೀನು ಅವರಿಗೆ, ‘ಮರಣ ವ್ಯಾಧಿಗೆ ನೇಮಿತರಾದವರು ಮರಣವ್ಯಾಧಿಗೆ, ಖಡ್ಗಕ್ಕೆ ನೇಮಿತರಾದವರು ಖಡ್ಗಕ್ಕೆ ಬಲಿಯಾಗಲಿ. ಕ್ಷಾಮಕ್ಕೆ ನೇಮಿತರಾದವರು ಕ್ಷಾಮಕ್ಕೆ, ಸೆರೆಗೆ ನೇಮಿತರಾದವರು ಸೆರೆಗೆ ಗುರಿಯಾಗಿ ಹೋಗಲಿ; ಇದೇ ಯೆಹೋವನ ನುಡಿ’” ಎಂದು ಹೇಳು.
ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.
ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!
ಅವರು ತಮ್ಮ ಶತ್ರುಗಳ ವಶವಾಗಿ ಸೆರೆಗೆ ಹೋದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಹತಿಸುವುದು. ಮೇಲಿಗಲ್ಲ, ಕೇಡಿಗಾಗಿಯೇ ಅವರ ಮೇಲೆ ದೃಷ್ಟಿಯಿಡುವೆನು.”