ಕರ್ತನೇ, ನನ್ನ ಬಾಯಿ ನಿನ್ನನ್ನು ಸ್ತೋತ್ರಮಾಡುವಂತೆ ನನ್ನ ತುಟಿಗಳನ್ನು ತೆರೆಯಮಾಡು.
TSK
TSK · ಯೆಹೆಜ್ಕೇಲನು 29:21
مراجع Treasury of Scripture Knowledge في ಕನ್ನಡ IRV.
ಬಡವರಿಗೆ ಉದಾರವಾಗಿ ಕೊಡುತ್ತಾನೆ; ಅವನ ನೀತಿಯ ಫಲವು ಸದಾಕಾಲವೂ ಇರುವುದು. ಮಹಿಮೆಯೊಡನೆ ಅವನ ಕೊಂಬು ಎತ್ತಲ್ಪಡುವುದು.
ಆತನು ತನ್ನ ಪ್ರಜೆಗೋಸ್ಕರ ಘನದ ಕೊಂಬನ್ನು ಎಬ್ಬಿಸಿದ್ದಾನೆ. ಆದುದರಿಂದ ಆತನ ಎಲ್ಲಾ ಭಕ್ತರು, ಆತನ ಸಮೀಪ ಪ್ರಜೆಗಳಾದ ಇಸ್ರಾಯೇಲರು ಹಿಗ್ಗುತ್ತಾರೆ. ಯೆಹೋವನಿಗೆ ಸ್ತೋತ್ರ!
ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು. ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು.
ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿ ತೆರೆದಿರುವುದು. ನೀನು ಇನ್ನು ಮೂಕನಾಗಿರದೆ ಮಾತನಾಡುವೆ ಮತ್ತು ಅವರಿಗೆ ಗುರುತಾಗಿರುವೆ. ನಾನೇ ಯೆಹೋವನು” ಎಂದು ಅವರಿಗೆ ಗೊತ್ತಾಗುವುದು.
ಆಗ ಐಗುಪ್ತದ ಸಕಲ ನಿವಾಸಿಗಳು ನಾನೇ ಯೆಹೋವನು ಎಂದು ತಿಳಿಯವರು. ಅವರು ಇಸ್ರಾಯೇಲ್ ವಂಶದವರಿಗೆ ದಂಟಿನ ಊರುಗೋಲಾಗಿದ್ದರು.
ಐಗುಪ್ತವು ಇನ್ನು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಅದರ ಕಡೆಗೆ ಕಣ್ಣೆತ್ತುವ ದೇವದ್ರೋಹದ ನೆನಪು ಇಸ್ರಾಯೇಲರಲ್ಲಿ ಐಗುಪ್ತದಿಂದ ಇನ್ನು ಹುಟ್ಟುವುದಿಲ್ಲ. ನಾನೇ ಯೆಹೋವನು’” ಎಂದು ಅವರಿಗೆ ತಿಳಿಯುವುದು.
ನಿಶ್ಚಯವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಯೋಜನೆಯನ್ನು ತಿಳಿಸದೆ ಯೆಹೋವನಾದ ದೇವರು ಏನನ್ನೂ ಮಾಡುವುದಿಲ್ಲ.
‹ಏಕೆಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರು ನಿಲ್ಲುವುದಕ್ಕೂ ಎದುರು ಮಾತನಾಡುವುದಕ್ಕೂ ಆಗದಂಥ ಬಾಯನ್ನೂ, ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.›