¶ “ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
TSK
TSK · ಎಜ್ರನು 1:2
مراجع Treasury of Scripture Knowledge في ಕನ್ನಡ IRV.
ಅವನು, “ಈ ಸಾಮಾನುಗಳನ್ನು ಯೆರೂಸಲೇಮಿನ ದೇವಾಲಯದಲ್ಲಿ ಇಡುವುದಕ್ಕೋಸ್ಕರ ತೆಗೆದುಕೊಂಡುಹೋಗಿ ಆ ದೇವಾಲಯವನ್ನು ಪುನಃ ಅದರ ಸ್ಥಳದಲ್ಲಿ ಕಟ್ಟಿಸು” ಎಂದು ಆಜ್ಞಾಪಿಸಿದನು.
ಅವರಾದರೋ ಪರಲೋಕದೇವರಿಗೆ ಸುಗಂಧಹೋಮಗಳನ್ನು ಸಮರ್ಪಿಸಿ, ರಾಜನ ಮತ್ತು ರಾಜಪುತ್ರರ ದೀರ್ಘಾಯಷ್ಯಕ್ಕಾಗಿ ಪ್ರಾರ್ಥನೆಮಾಡಲಿ.
ನಾನು ಈ ವರ್ತಮಾನವನ್ನು ಕೇಳಿದ ಕ್ಷಣವೇ ನೆಲದ ಮೇಲೆ ಬಿದ್ದು ಅತ್ತೆನು; ಹಲವು ದಿನಗಳವರೆಗೂ ಶೋಕಿಸುತ್ತಾ ಉಪವಾಸವಾಗಿದ್ದು ಪರಲೋಕದ ದೇವರ ಮುಂದೆ ವಿಜ್ಞಾಪನೆ ಮಾಡುತ್ತಾ ಇದ್ದೆನು.
ನಿನ್ನ ಪ್ರಜೆಯ ದ್ರೋಹವನ್ನು ಕ್ಷಮಿಸಿದ್ದಿ; ಅವರ ಎಲ್ಲಾ ಪಾಪಗಳನ್ನು ಅಳಿಸಿಬಿಟ್ಟಿದ್ದಿ. ಸೆಲಾ
ಮೂಡಣದಿಂದ ಒಬ್ಬನನ್ನು ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು.
ಯೆಹೋವನು ಯಾರ ಕೈಹಿಡಿದು, ಯಾರ ಎದುರಿಗೆ ಜನಾಂಗಗಳನ್ನು ತುಳಿದು, ರಾಜರ ನಡುಕಟ್ಟನ್ನು ಬಿಚ್ಚಿ, ಯಾರ ಮುಂದೆ ಹೆಬ್ಬಾಗಿಲುಗಳನ್ನು ತೆರೆದು, ಮುಚ್ಚಲ್ಲಿಲ್ಲವೋ, ತಾನು ಅಭಿಷೇಕಿಸಿದ ಆ ಕೋರೆಷನಿಗೆ ಹೀಗೆನ್ನುತ್ತಾನೆ,
ಯೆಹೋವನು ಹೀಗೆನ್ನುತ್ತಾನೆ: “ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು?
‘ನಾನೇ ಕೈ ನೀಡಿ ನನ್ನ ಮಹಾ ಶಕ್ತಿಯಿಂದ ಲೋಕವನ್ನೂ ಭೂಮಿಯ ಮೇಲಣ ಮಾನವರನ್ನೂ ಪಶುಗಳನ್ನೂ ಸೃಷ್ಟಿಸಿದ್ದೇನೆ; ಈ ನನ್ನ ಸೃಷ್ಟಿಯನ್ನು ನನಗೆ ಸರಿತೋಚಿದವನಿಗೇ ಕೊಡಬಲ್ಲೆನು.
¶ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ರಾಜ್ಯವು ಎಪ್ಪತ್ತು ವರ್ಷ ಪ್ರಬಲಿಸಿದ ಮೇಲೆ ನಾನು ನಿಮ್ಮನ್ನು ಕಟಾಕ್ಷಿಸಿ, ಈ ಸ್ಥಳಕ್ಕೆ ತಿರುಗಿ ಬರಮಾಡುವೆನೆಂಬ ನನ್ನ ಶುಭವಾಕ್ಯವನ್ನು ನಿಮಗಾಗಿ ನೆರವೇರಿಸುವೆನು.
ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.
ಅರಸನೇ, ನೀನು ರಾಜಾಧಿರಾಜ, ಪರಲೋಕ ದೇವರು ನಿನಗೆ ರಾಜ್ಯಬಲ, ಪರಾಕ್ರಮ, ವೈಭವಗಳನ್ನು ದಯಪಾಲಿಸಿದ್ದಾನೆ.
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.