ನಿಮ್ಮ ದೇವರಾದ ಯೆಹೋವನು ದೇವಾಧಿದೇವನಾಗಿಯೂ, ಕರ್ತರ ಕರ್ತನಾಗಿಯೂ ಇದ್ದಾನೆ. ಆತನು ಪರಮದೇವರೂ, ಪರಾಕ್ರಮಿಯೂ ಮತ್ತು ಭಯಂಕರನೂ ಆಗಿದ್ದಾನೆ. ಆತನು ಪಕ್ಷಪಾತ ಮಾಡುವವನಲ್ಲ ಹಾಗೂ ಲಂಚತೆಗೆದುಕೊಳ್ಳುವವನಲ್ಲ.
TSK
TSK · ಎಜ್ರನು 5:8
مراجع Treasury of Scripture Knowledge في ಕನ್ನಡ IRV.
ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ, “ಪರ್ಷಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ. ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
ದೊಡ್ಡ ಕಲ್ಲುಗಳ ಮೂರು ಸಾಲುಗಳಾದ ಮೇಲೆ ಹೊಸ ಮರದ ಒಂದು ಸಾಲನ್ನು ಹಾಕಿ ಕಟ್ಟಬೇಕು. ವೆಚ್ಚವೆಲ್ಲಾ ರಾಜಭಂಡಾರದಿಂದ ಕೊಡಲ್ಪಡುವುದು.
ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೈವಕೋಪ ಉಂಟಾಗದ ಹಾಗೆ ನೀವು ಪರಲೋಕದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿ ಕೊಡಬೇಕು.
¶ ಯೆರೂಸಲೇಮಿನಲ್ಲಿ ವಾಸಿಸುತ್ತಿದ್ದ ಯೆಹೂದ ಸಂಸ್ಥಾನ ಪ್ರಧಾನರು ಯಾರಾರೆಂದರೆ: ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ದೇವಾಲಯದ ಸೇವಕರು, ಸೊಲೊಮೋನನ ಸೇವಕರ ವಂಶದವರೂ ತಮ್ಮ ತಮ್ಮ ಸ್ವತ್ತುಗಳಿರುವ ಯೆಹೂದ ದೇಶದ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.
ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
ಅರಸನು ದಾನಿಯೇಲನಿಗೆ ಪ್ರತ್ಯುತ್ತರವಾಗಿ, “ನೀನು ಈ ರಹಸ್ಯವನ್ನು ಬಯಲಿಗೆ ತರಲು ಸಮರ್ಥನಾದ ಕಾರಣ ನಿಮ್ಮ ದೇವರು ದೇವಾಧಿದೇವನೂ, ರಾಜರ ಒಡೆಯನೂ, ರಹಸ್ಯಗಳನ್ನು ವ್ಯಕ್ತಗೊಳಿಸುವವನೂ ಆಗಿದ್ದಾನೆ ಎಂಬುದು ನಿಶ್ಚಯ” ಎಂದು ಹೇಳಿದನು.
ಪರಾತ್ಪರನಾದ ದೇವರು ನನ್ನ ವಿಷಯದಲ್ಲಿ ನಡೆಸಿರುವ ಮಹತ್ತುಗಳನ್ನೂ, ಅದ್ಭುತಗಳನ್ನೂ ಪ್ರಚುರಪಡಿಸಬೇಕೆಂಬುವುದು ನನಗೆ ಸ್ಪಷ್ಟವಾಗಿ ತೋರಿಬಂದಿದೆ.
¶ “ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;