¶ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
TSK
TSK · ಎಜ್ರನು 7:6
مراجع Treasury of Scripture Knowledge في ಕನ್ನಡ IRV.
¶ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.
ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.
¶ ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.
ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.
ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,
ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.
ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.
¶ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.
ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.
ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.
ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.
ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.
ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.
ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.
ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
¶ ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.