ಊರು ಬಾಗಿಲಿಗೆ ಹಿರಿಯರ ಮುಂದೆ ತಂದು ಅವರಿಗೆ, “ಈ ನಮ್ಮ ಮಗನು ನಮ್ಮ ಮಾತನ್ನು ಕೇಳುವುದೇ ಇಲ್ಲ, ಆಜ್ಞೆಗೆ ಒಳಗಾಗುವುದಿಲ್ಲ; ಇವನು ಮೊಂಡ, ಕುಡುಕ ಮತ್ತು ಹೊಟ್ಟೆಬಾಕ” ಎಂದು ಸಾಕ್ಷಿಹೇಳಬೇಕು.
TSK
TSK · ಗಲಾತ್ಯದವರಿಗೆ 5:21
مراجع Treasury of Scripture Knowledge في ಕನ್ನಡ IRV.
‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›
ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು.
ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು,
ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.
¶ ನಾನು ನಿಮ್ಮ ಸಂಗಡ ಇದ್ದಾಗ ಈ ಸಂಗತಿಗಳನ್ನು ಹೇಳಿದ್ದು ಜ್ಞಾಪಕವಿಲ್ಲವೋ?
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.