ನನಗೂ ಭೂಜೀವಿಗಳಿಗೂ ಮಾಡಿಕೊಂಡ ಒಡಂಬಡಿಕೆಗೆ ಇದೇ ಗುರುತಾಗಿರಲಿ.
TSK
TSK · ಆದಿಕಾಂಡ 1:14
مراجع Treasury of Scripture Knowledge في ಕನ್ನಡ IRV.
ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ಮಿಣುಕದೆ ಹೋಗಲಿ. ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ. ಅರುಣೋದಯವೆಂಬ ರೆಪ್ಪೆ ತೆರೆಯುವುದನ್ನು ಅದು ಕಾಣದಿರಲಿ.
ನೋಡಿರಿ, ಆತನ ದೃಷ್ಟಿಯಲ್ಲಿ ಚಂದ್ರನಿಗಾದರೂ ಕಳೆಯಿಲ್ಲ, ನಕ್ಷತ್ರಗಳೂ ಶುದ್ಧವಲ್ಲ.
ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ?
ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
ಹಗಲಿರುಳುಗಳನ್ನು ನೇಮಿಸಿದವನು ನೀನು; ಸೂರ್ಯ ಮತ್ತು ಜ್ಯೋತಿರ್ಮಂಡಲಗಳ ನಿರ್ಮಾಪಕನು ನೀನು.
ವಿಶೇಷಕಾಲಗಳ ಸೂಚನೆಗಾಗಿ ಚಂದ್ರನನ್ನು ನಿರ್ಮಿಸಿರುವೆ; ಸೂರ್ಯನು ತನ್ನ ಅಸ್ತಮಾನ ಸಮಯವನ್ನು ಬಲ್ಲನು.
ಆತನು ಮಹಾ ಜ್ಯೋತಿರ್ಮಂಡಲಗಳನ್ನು ಸೃಷ್ಟಿಸಿದ್ದಾನೆ, ಆತನ ಪ್ರೀತಿಯು ಶಾಶ್ವತವಾದದ್ದು.
ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.
ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ.
“ಯೆಹೋವನು ಇಂತೆನ್ನುತ್ತಾನೆ, ನೀವು ಹಗಲಿರುಳೆಂಬ ನನ್ನ ನಿಬಂಧನೆಗಳನ್ನು ನಿಲ್ಲಿಸಿ ಹಗಲನ್ನು, ಇರುಳನ್ನು ಅದರದರ ಸಮಯದಲ್ಲಿ ಉಂಟಾಗದಂತೆ ಮಾಡಬಹುದಾದರೆ,
ಫರೋಹನನೇ, ಆಗ ನಾನು ನಿನ್ನ ಬೆಳಕನ್ನು ನಂದಿಸುವಾಗ, ಆಕಾಶಕ್ಕೆ ಮುಸುಕುಹಾಕಿ, ಅಲ್ಲಿನ ನಕ್ಷತ್ರಗಳನ್ನು ಮಸುಕುಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು, ಚಂದ್ರನೂ ಪ್ರಕಾಶಿಸನು.
ಅಮಾವಾಸ್ಯೆಯಲ್ಲಿ ಅವನು ಪೂರ್ಣಾಂಗವಾದ ಒಂದು ಹೋರಿಯನ್ನೂ, ಆರು ಕುರಿಗಳನ್ನೂ, ಒಂದು ಟಗರನ್ನೂ ಒಪ್ಪಿಸತಕ್ಕದ್ದು. ಅವು ಪೂರ್ಣಾಂಗವಾಗಿಯೇ ಇರಬೇಕು.
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು ಮಾಡುವೆನು. ರಕ್ತ, ಬೆಂಕಿ, ಧೂಮಸ್ತಂಭ ಈ ಉತ್ಪಾತಗಳನ್ನು ಉಂಟುಮಾಡುವೆನು.
ಕೃತ್ತಿಕಾ ಮತ್ತು ಒರಿಯನ್ ಎಂಬ ಪ್ರಕಾಶಮಾನವಾದ ನಕ್ಷತ್ರಗಳನ್ನು ಸೃಷ್ಟಿಸಿ, ಕಾರ್ಗತ್ತಲನ್ನು ಬೆಳಕನ್ನಾಗಿ ಮಾಡಿ, ಹಗಲನ್ನು ಇರುಳಾಗಿ ಮಾರ್ಪಡಿಸಿ, ಸಾಗರದ ಜಲವನ್ನು ಬರಮಾಡಿಕೊಂಡು, ಭೂಮಂಡಲದ ಮೇಲೆ ಸುರಿಯುವಾತನ ಕಡೆಗೆ ತಿರುಗಿಕೊಳ್ಳಿರಿ, ಯೆಹೋವನೆಂಬುದೇ ಆತನ ನಾಮಧೇಯ!
“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು.
¶ ‹“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.›
¶ ‹“ಇದಲ್ಲದೆ ಸೂರ್ಯ ಚಂದ್ರ ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು. ಭೋರ್ಗರೆಯುವ ಸಮುದ್ರ ಮತ್ತು ಅಲೆಗಳ ಘೋಷದ ನಿಮಿತ್ತವಾಗಿ ಭೂಮಿಯ ಮೇಲೆ ಜನಗಳಿಗೆ ದಿಕ್ಕುಕಾಣದೆ ಸಂಕಟವು ಉಂಟಾಗುವುದು.›
ಕರ್ತನ ಆಗಮನದ ಗಂಭೀರವಾದ ಮಹಾ ದಿನವು ಬರುವುದಕ್ಕೆ ಮೊದಲೇ ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನ್ನೂ ಕೆಳಗೆ ಭೂಮಿಯಲ್ಲಿ ಸೂಚಕಕಾರ್ಯಗಳನ್ನೂ ಉಂಟುಮಾಡುವೆನು. ರಕ್ತ, ಬೆಂಕಿ, ಹಬೆಯಂತೆ ಏರುವ ಹೊಗೆ ಇವು ಉಂಟಾಗುವವು. ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.
¶ ನಾಲ್ಕನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು, ಆಗ ಸೂರ್ಯನ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಯಿತು. ಅದೇ ಪ್ರಕಾರ ಚಂದ್ರನಲ್ಲಿ ಮತ್ತು ನಕ್ಷತ್ರಗಳಲ್ಲಿ ಮೂರರಲ್ಲಿ ಒಂದು ಭಾಗಕ್ಕೆ ತೊಂದರೆಯುಂಟಾಗಿ ಕತ್ತಲಾಗಿ ಹೋಯಿತು. ಇದರಿಂದ ಹಗಲಿನಲ್ಲಿ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಕತ್ತಲಾಗಿ, ರಾತ್ರಿಯ ಹಾಗೆಯೇ ಆಯಿತು.