¶ ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
TSK
TSK · ಆದಿಕಾಂಡ 1:20
مراجع Treasury of Scripture Knowledge في ಕನ್ನಡ IRV.
ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
ನಿನ್ನ ಬಳಿಯಲ್ಲಿರುವ ಪಶು, ಪಕ್ಷಿ, ಕ್ರಿಮಿಕೀಟ ಮುಂತಾದ ಎಲ್ಲಾ ಜೀವಿಗಳೂ ಹೊರಗೆ ಬರಲಿ; ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ; ಅವು ಅಭಿವೃದ್ಧಿಯಾಗಿ ಹೆಚ್ಚಲಿ” ಎಂದು ಹೇಳಿದನು.
ಈ ಎಲ್ಲವುಗಳ ಸಾಕ್ಷಿಯಿಂದ ಯೆಹೋವನ ಕೈಯೇ ಸಕಲ ಕಾರ್ಯಗಳನ್ನು ಮಾಡುತ್ತದೆ ಎಂದು ಯಾರಿಗೆ ತಾನೇ ಗೊತ್ತಾಗುವುದಿಲ್ಲ?
ಇಗೋ, ಬಹುವಿಶಾಲವಾದ ಸಮುದ್ರವು! ಅದರೊಳಗೆ ಲೆಕ್ಕವಿಲ್ಲದಷ್ಟು ಸಣ್ಣ, ದೊಡ್ಡ ಜೀವಜಂತುಗಳು ಚಲಿಸುತ್ತಿರುತ್ತವೆ.
ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ.