¶ ಯೆಹೋವ ದೇವರು “ಈ ಮನುಷ್ಯನು ಒಳ್ಳೆಯದರ ಮತ್ತು ಕೆಟ್ಟದ್ದರ ಬೇಧವನ್ನರಿತು ನಮ್ಮಲ್ಲಿ ಒಬ್ಬನಂತಾದನಲ್ಲಾ? ಇದರಿಂದ ಇವನು ಕೈಚಾಚಿ ಜೀವವೃಕ್ಷದ ಫಲವನ್ನು ಸಹ ತಿಂದು ಶಾಶ್ವತವಾಗಿ ಬದುಕುವವನಾಗಬಾರದು” ಎಂದು ಆಜ್ಞಾಪಿಸಿದನು.
TSK
TSK · ಆದಿಕಾಂಡ 1:26
مراجع Treasury of Scripture Knowledge في ಕನ್ನಡ IRV.
ಭೂಮಿಯ ಮೇಲಿರುವ ಎಲ್ಲಾ ಮೃಗಗಳೂ, ಆಕಾಶದ ಎಲ್ಲಾ ಪಕ್ಷಿಗಳೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಗಳೂ, ಸಮುದ್ರದ ಮೀನುಗಳೂ ನಿಮಗೆ ಹೆದರುವವು. ನಾನು ಅವುಗಳನ್ನೆಲ್ಲಾ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.
ಇವರಲ್ಲಿ ಒಬ್ಬರ ಮಾತು ಒಬ್ಬರಿಗೆ ತಿಳಿಯದಂತೆ ಇವರ ಭಾಷೆಯನ್ನು ಗಲಿಬಿಲಿ ಮಾಡೋಣ ಬನ್ನಿ” ಎಂದನು.
‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.
ಮನುಷ್ಯನು ಎಷ್ಟು ಮಾತ್ರದವನು, ಅವನನ್ನು ನೀನು ಏಕೆ ಸ್ಮರಿಸಬೇಕು? ಮಾನವನು ಎಷ್ಟರವನು? ಅವನಲ್ಲಿ ಏಕೆ ಲಕ್ಷ್ಯವಿಡಬೇಕು?
ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ.
ಇಸ್ರಾಯೇಲರು ತಮ್ಮ ಸೃಷ್ಟಿಕರ್ತನಲ್ಲಿ ಹೆಮ್ಮೆಪಡಲಿ; ಚೀಯೋನಿನವರು ತಮ್ಮ ರಾಜನಲ್ಲಿ ಹರ್ಷಿಸಲಿ.
ನಾನು ನಿನಗಾಗಿ ಬಂಗಾರದ ಅಂಚಿನಿಂದ ಕೂಡಿರುವ, ಬೆಳ್ಳಿಯ ಕುಚ್ಚಗಳನ್ನು ಮಾಡಿಸುವೆನು.
ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ.
ಅದಕ್ಕೆ ಯೇಸು ಅವರಿಗೆ, ‹“ನನ್ನ ತಂದೆಯು ಇಂದಿನವರೆಗೂ ಕೆಲಸ ಮಾಡುತ್ತಿದ್ದಾನೆ, ನಾನೂ ಕೆಲಸ ಮಾಡುತ್ತೇನೆ”› ಎಂದು ಹೇಳಿದನು.
ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
ಏಕೆಂದರೆ ಆತನಲ್ಲಿಯೇ ನಾವು ಜೀವಿಸುತ್ತೇವೆ, ಚಲಿಸುತ್ತೇವೆ ಮತ್ತು ಇರುತ್ತೇವೆ. ನಿಮ್ಮ ಕವಿಗಳಲ್ಲಿ ಕೆಲವರು, ‘ನಾವು ಆತನ ಸಂತಾನದವರೇ’ ಎಂದು ಹೇಳಿದ್ದಾರೆ.
ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.
ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
¶ ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು.
ಇದಲ್ಲದೆ ಸಾಕ್ಷಿ ಕೊಡುವವರು ಮೂವರಿದ್ದಾರೆ.