¶ ಬರವು ಭೂಮಿಯ ಮೇಲೆಲ್ಲಾ ಹರಡಿಕೊಂಡಿದಾಗ ಯೋಸೇಫನು ಕಣಜಗಳನ್ನೆಲ್ಲಾ ತೆಗೆದು ಐಗುಪ್ತರಿಗೆ ಧಾನ್ಯವನ್ನು ಮಾರಿದನು. ಐಗುಪ್ತ ದೇಶದಲ್ಲಿ ಬರವು ಬಹುಘೋರವಾಗಿತ್ತು.
TSK
TSK · ಆದಿಕಾಂಡ 12:10
مراجع Treasury of Scripture Knowledge في ಕನ್ನಡ IRV.
¶ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೋಸ್ಕರ ಐಗುಪ್ತ ದೇಶಕ್ಕೆ ಬಂದವರಲ್ಲಿ ಇಸ್ರಾಯೇಲನ ಮಕ್ಕಳೂ ಇದ್ದರು, ಏಕೆಂದರೆ ಕಾನಾನ್ ದೇಶದಲ್ಲಿಯೂ ಬರವಿತ್ತು.
¶ ಆತನು ಅವನಿಗೆ, “ನಾನೇ ದೇವರು, ನಿನ್ನ ತಂದೆಯ ದೇವರು ನಾನೇ; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾ ಜನಾಂಗವುಂಟಾಗುವಂತೆ ಮಾಡುವೆನು.
¶ ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.
¶ ಗಿಲ್ಯಾದಿನ ತಿಷ್ಬೀಯ ಊರಿನವನಾದ ಎಲೀಯ ಎಂಬುವವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.
¶ ಎಲೀಷನು ತಾನು ಬದುಕಿಸಿದ ಹುಡುಗನ ತಾಯಿಗೆ, “ಯೆಹೋವನು ಈ ದೇಶಕ್ಕೆ ಏಳು ವರ್ಷಗಳ ಕಾಲ ಕ್ಷಾಮವನ್ನು ಬರಮಾಡುವುದಕ್ಕಿದ್ದಾನೆ. ಆದುದರಿಂದ ನೀನು ನಿನ್ನ ಮನೆಯವರೊಡನೆ ಯಾವುದಾದರೊಂದು ಪರದೇಶಕ್ಕೆ ಹೋಗಿ ಅಲ್ಲಿ ವಾಸಿಸು” ಎಂದು ಹೇಳಿದನು.
ಅವರು ದೇಶದಿಂದ ದೇಶಕ್ಕೂ, ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಾಗ,
¶ ಬರಗಾಲದ ವಿಷಯವಾಗಿ ಯೆಹೋವನು ಯೆರೆಮೀಯನಿಗೆ ದಯಪಾಲಿಸಿದ ನುಡಿ:
¶ “ಆಗ ಐಗುಪ್ತ ಮತ್ತು ಕಾನಾನ್ ದೇಶಗಳಲ್ಲಿ ಎಲ್ಲೆಲ್ಲಿಯೂ ಬರಗಾಲ ಬಂದು ಜನರಿಗೆ ಬಹಳ ಸಂಕಟವಾಯಿತು; ಅಲ್ಲಿ ನಮ್ಮ ಪೂರ್ವಿಕರಿಗೆ ಆಹಾರ ಸಿಕ್ಕಲಿಲ್ಲ.