¶ ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;
TSK
TSK · ಆದಿಕಾಂಡ 15:1
مراجع Treasury of Scripture Knowledge في ಕನ್ನಡ IRV.
¶ ಅಬ್ರಹಾಮನು ತನ್ನ ತಮ್ಮನಾದ ನಾಹೋರನಿಗೆ ಮಿಲ್ಕಳಲ್ಲಿ ಮಕ್ಕಳು ಹುಟ್ಟಿದ್ದಾರೆ ಎಂಬ ವರ್ತಮಾನವನ್ನು ಕೇಳಿದನು.
¶ ಅಲ್ಲಿ ದೇವರು ರಾತ್ರಿಯ ದರ್ಶನದಲ್ಲಿ ಇಸ್ರಾಯೇಲನಿಗೆ, “ಯಾಕೋಬನೇ, ಯಾಕೋಬನೇ” ಎಂದು ಕರೆಯಲು, ಅವನು, “ಇಗೋ ಇದ್ದೇನೆ” ಎಂದನು.
¶ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.
¶ ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿಯೂ; ನೀನು ನನ್ನ ಗೌರವಕ್ಕೆ ಆಧಾರನೂ, ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ.
ಯೆಹೋವನೇ, ನೀತಿವಂತನನ್ನು ಆಶೀರ್ವದಿಸುವವನು ನೀನೇ; ನಿನ್ನ ದಯವು ದೊಡ್ಡ ಗುರಾಣಿಯಂತೆ ಅವನನ್ನು ಆವರಿಸಿಕೊಳ್ಳುವುದು.
ಯೆಹೋವನು ನನ್ನ ಬಂಡೆಯು, ನನ್ನ ಕೋಟೆಯು, ನನ್ನ ವಿಮೋಚಕನು, ನನ್ನ ದೇವರು, ನನ್ನ ಆಶ್ರಯಗಿರಿಯು, ನನ್ನ ಗುರಾಣಿಯು, ನನ್ನ ರಕ್ಷಣೆಯ ಕೊಂಬು ಮತ್ತು ನನ್ನ ದುರ್ಗವು ಆಗಿದ್ದಾನೆ.
ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
ಯೆಹೋವ ದೇವರು ಸೂರ್ಯನೂ, ಗುರಾಣಿಯೂ ಆಗಿದ್ದಾನಲ್ಲಾ. ಯೆಹೋವನು ಕೃಪೆಯನ್ನೂ, ಘನವನ್ನೂ ಅನುಗ್ರಹಿಸುವನು; ಆತನು ಸದ್ಭಕ್ತರಿಗೆ ಯಾವ ಶುಭವನ್ನು ದಯಪಾಲಿಸದೆ ಇದ್ದಾನೋ?
ಆರೋನನ ಮನೆತನದವರೇ, ಯೆಹೋವನಲ್ಲಿ ಭರವಸವಿಡಿರಿ. ಅವರ ಸಹಾಯಕನು, ಗುರಾಣಿಯು ಆತನೇ.
ಯೆಹೋವನೇ, ನಾನು ನಿನಗೆ, “ನೀನೇ ನನ್ನ ಶರಣನೂ, ಜೀವಲೋಕದಲ್ಲಿ ನನ್ನ ಪಾಲೂ ಆಗಿದ್ದಿ” ಎಂದು ಕೂಗಿ ಮೊರೆಯಿಟ್ಟಿದ್ದೇನೆ.
ದೇವರ ಪ್ರತಿಯೊಂದು ಮಾತು ಶುದ್ಧವಾದದ್ದು, ಆತನು ಶರಣಾಗತರಿಗೆ ಗುರಾಣಿಯಾಗಿದ್ದಾನೆ.
ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ.
ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ.
ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ; ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು.
ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.”
ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
¶ ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ವಾಸಿಸುತ್ತಿದ್ದಾಗ, ಮೂವತ್ತನೆಯ ವರ್ಷದ, ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ತೆರೆಯಲ್ಪಟ್ಟಿತು, ನಾನು ದೇವ ದರ್ಶನಗಳನ್ನು ಕಂಡೆನು.
ಆಮೇಲೆ ದೇವರಾತ್ಮ ಪರವಶನಾದ ನನ್ನನ್ನು ಎತ್ತಿ, ದಿವ್ಯ ದರ್ಶನದ ಮುಖಾಂತರ ಕಸ್ದೀಯರ ದೇಶದಲ್ಲಿ ಸೆರೆಯಾದವರ ಬಳಿಗೆ ಕರೆತಂದಿತು. ನನಗಾದ ದಿವ್ಯದರ್ಶನವು ಆಗ ಮಾಯವಾಯಿತು.
ಆತನು ಅವರಿಗೆ, ‹“ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?”› ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
ಆಗ ದೂತನು ಆ ಹೆಂಗಸರಿಗೆ, “ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ನೀವು ಹುಡುಕುತ್ತಿದ್ದೀರೆಂದು ನಾನು ಬಲ್ಲೆನು;
ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.
ಅವನಿಗೆ ಬಹಳ ಹಸಿವಾಗಿ ಊಟಮಾಡ ಬಯಸಿದನು. ಅವರು ಊಟಕ್ಕೆ ಸಿದ್ಧಮಾಡುತ್ತಿರುವಷ್ಟರಲ್ಲಿ,
ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ ಲೋಕವಾಗಲಿ, ಜೀವವಾಗಲಿ ಮರಣವಾಗಲಿ ಈಗಿನ ಸಂಗತಿಗಳಾಗಲಿ ಮುಂದಣ ಸಂಗತಿಗಳಾಗಲಿ ಸಮಸ್ತವೂ ನಿಮ್ಮದೇ.
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.